ದಸ-ರೆ-ಗೆ ಅವ-ರು ಕೋಟಿ ಕೇಳಿ-ದ-ರು, ಇವ-ರು 65 ಲಕ್ಷ ಕೊಟ್ಟ-ರು
ಮೈಸೂರು : ರಾಜ್ಯ ಸರಕಾರ ಸೆಪ್ಟಂಬರ್ 28ರಂದು ಆರಂಭವಾಗಲಿರುವ ಮೈಸೂರು ದಸರಾ ಉತ್ಸ-ವ-ಕ್ಕೆ 65 ಲಕ್ಷ ರೂಪಾಯಿ ಬಿಡುಗಡೆ ಮಾಡಿದೆ.
ದಸರಾ ಮಹೋತ್ಸವಕ್ಕೆ ಒಂದು ಕೋಟಿ ರೂಪಾಯಿಗಳನ್ನು ರಾಜ್ಯ ಸರಕಾರ ಬಿಡುಗಡೆ ಮಾಡಬೇಕು ಎಂದು ಮೈಸೂರು ಜಿಲ್ಲಾಡಳಿತ ಸರಕಾರದ ಮುಂದೆ ತನ್ನ ಬೇಡಿಕೆಯನ್ನಿಟ್ಟಿತ್ತು. ಈ ಬೇಡಿಕೆಯನ್ನು ಪುರಸ್ಕರಿಸಿ, ಸರಕಾರ 65 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಒಂದು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ಸಲ್ಲಿಸಿದ ಮನವಿಗೆ ಸರಕಾರ ಕೇವಲ 65 ಲಕ್ಷ ರೂಪಾಯಿ ಬಿಡುಗಡೆ ಮಾಡಿರುವುದಕ್ಕೆ ಮತ್ತು ತಮ್ಮ ಎಲ್ಲ ಪ್ರಸ್ತಾವನೆಗಳನ್ನು ರಾಜ್ಯ ಸರಕಾರ ಒಪ್ಪದೇ ಇರುವುದಕ್ಕೆ ಮೈಸೂರು ನಗರ ಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.
ಅಸ-ಮಾ-ಧಾ-ನ-ದ ನಡು-ವೆ-ಯೇ ಹಣ ಬಿಡುಗಡೆಯಾಗುವುದರೊಂದಿಗೆ ಮೈಸೂರು ದಸರಾಕ್ಕೆ ತಯಾರಿಗಳು ಆರಂಭವಾಗಿವೆ. ಮೈಸೂರು ನಗರ ಸಭೆ ರಸ್ತೆಗಳ ಅಭಿವೃದ್ಧಿ ಗಾಗಿ 2 ಕೋಟಿ ರೂಪಾಯಿ ಕೇಳಿದ್ದರೆ, ಬನ್ನಿ ಮಂಟಪದ ಅಭಿವೃದ್ಧಿ ಕಾರ್ಯಕ್ಕಾಗಿ 25 ಲಕ್ಷ ರೂಪಾಯಿಗಳನ್ನು ನಗರಾಭಿವೃದ್ಧಿ ಪ್ರಾಧಿಕಾರ ಕೇಳಿತ್ತು ಎಂದು ವಿಭಾಗೀಯ ಆಯುಕ್ತ ಲೋಖಾರೆ ಹೇಳಿದ್ದಾರೆ.
ವ್ಯವಸ್ಥೆಗಳು : ಜಂಬೂಸವಾರಿಯ ನಂತರ ಬನ್ನಿ ಮಂಟಪದ ಬಯಲಿನಲ್ಲಿ ನಡೆಯುವ ಪಂಜಿನ ಕವಾಯತನ್ನು ಎಲ್ಲರೂ ವೀಕ್ಷಿಸಲು ಸಹಕಾರಿಯಾಗುವಂತೆ ವೀಡಿಯೋ ಅಳವಡಿಸಲಾಗುವುದು. ದಸರಾ ಉತ್ಸವದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಬನ್ನಿ ಮಂಟಪದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಮೆರವಣಿಗೆ ಹಾದು ಹೋಗುವ ಪ್ರದೇಶಗಳಲ್ಲಿ ಶೌಚಾಯಲಯದ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಸಮಸ್ಯೆಯೇ.... ?: ದಸರಾ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಪ್ರವಾಸೀ ತಾಣಗಳಲ್ಲಿರುವ ರಕ್ಷಕರ ವಿರುದ್ದ ಸಾಕಷ್ಟು ದೂರುಗಳು ಬರುತ್ತಿವೆ. ಇದನ್ನು ತಡೆಯಲು ಸಾರಿಗೆ ಆಯುಕ್ತರ ನೇತೃತ್ವದಲ್ಲಿ ಈ ಬಾರಿ ಸಮಿತಿಯಾಂದನ್ನು ರಚಿಸಲಾಗಿದ್ದು, ಪ್ರವಾಸಿಗರಿಗೆ ಏನೇ ಅನನುಕೂಲವಾದಲ್ಲಿ ಸಮಿತಿಗೆ ದೂರು ಸಲ್ಲಿಸಬಹುದು. ಆ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ಸಮಿತಿಯನ್ನು ಸಂಪರ್ಕಿಸುವ ಪ್ರವಾಸಿಗರಿಗೆ ಸಾರಿಗೆ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದು ವಿಭಾಗೀಯ ಆಯುಕ್ತ ರು ಹೇಳಿದ್ದಾರೆ .
ಮೆರವಣಿಗೆಯಲ್ಲಿ : ಎಂದಿನಂತೆ ಸ್ವಾತಂತ್ರ್ಯ ಹೋರಾಟಗಾರರೂ ಮೆರವಣಿಗೆಯಲ್ಲಿ ಭಾಗವಹಿಸುವುದಲ್ಲದೆ ಕಾರ್ಗಿಲ್ ಯುದ್ಧದಲ್ಲಿ ಮಡಿದವರ ಕುಟುಂಬದವರನ್ನು ಆಹ್ವಾನಿಸಲಾಗಿದೆ. ಎನ್ಜಿಓ ಗಳು, ಸ್ಥಳೀಯ ಕಾರ್ಖಾನೆಗಳನ್ನು ನಡೆಸುವ ಉದ್ಯಮಶೀಲರನ್ನೂ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಕೇಳಿಕೊಳ್ಳಲಾಗಿದೆ. ಮೋಟಾರು ವಾಹನ ತಯಾರಕರಿಗೆ ತಮ್ಮ ಕ್ರಿಯಾಶೀಲತೆಯನ್ನು ಪ್ರದರ್ಶಿಸಲು ಮೆರವಣಿಗೆಯಲ್ಲಿ ಅವಕಾಶವಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಬೆಂಗಳೂರಿನ ವಿಂಟೇಜ್ ಕಾರ್ ಸಂಸ್ಥೆಗೆ ಆಹ್ವಾನ ಪತ್ರಿಕೆ ರವಾನಿಸಲಾಗಿದೆ.
(ಮೈಸೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications