Get Updates
Get notified of breaking news, exclusive insights, and must-see stories!

‘ಕೈಗಾರಿಕೆಗಳ ಸಮಸ್ಯೆ ಪರಿಹಾರಕ್ಕೆ ಪ್ರತಿ ಜಿಲ್ಲೆಯಲ್ಲಿ ಕೈಗಾರಿಕಾ ಅದಾಲತ್‌’

ಬೆಂಗಳೂರು : ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕೈಗಾರಿಕಾ ಅದಾಲತ್‌ ನಡೆಸುವ ಮೂಲಕ ಕೈಗಾರಿಕೆಗಳ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸುವುದಾಗಿ ರಾಜ್ಯ ಬೃಹತ್‌ ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರುವ ಮಾರ್ಚ್‌ನಿಂದ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ರೋಗಗ್ರಸ್ಥ ಕೈಗಾರಿಕೆಗಳ ಪಟ್ಟಿ ಸಿದ್ಧಪಡಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಆದೇಶ ನೀಡಲಾಗಿದೆ ಎಂದೂ ಹೇಳಿದರು.

ರಾಜ್ಯದಲ್ಲಿ 2092.53 ಕೋಟಿ ರುಪಾಯಿ ಬಂಡವಾಳ ಹೂಡಿಕೆಯ 9 ಯೋಜನೆಗಳಿಗೆ ಗುರುವಾರ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅನುಮತಿ ನೀಡಲಾಗಿದೆ ಇದರಲ್ಲಿ ನಗರದ ನಾಗವಾರ ಬಳಿ 700 ಎಕರೆ ಭೂ ಪ್ರದೇಶದಲ್ಲಿ ತಲೆ ಎತ್ತಲಿರುವ 750 ಕೋಟಿ ರುಪಾಯಿ ವೆಚ್ಚದ ಮಾಹಿತಿ ತಂತ್ರಜ್ಞಾನ ಪಾರ್ಕ್‌ ಕೂಡ ಸೇರಿದೆ ಎಂದೂ ಅವರು ಹೇಳಿದರು.

ಸಕಲ ಮೂಲಭೂತ ಸೌಕರ್ಯಗಳನ್ನು ಹೊಂದಿದ 12 ಟ್ರಕ್‌ ಟರ್ಮಿನಲ್‌ಗಳನ್ನು 350 ಕೋಟಿ ರುಪಾಯಿ ವೆಚ್ಚದಲ್ಲಿ ರಾಜ್ಯದ ವಿವಿಧೆಡೆ ಪ್ರಾರಂಭಿಸಲು ಟ್ರೇಡಿಂಗ್‌ ಕಂಪನಿಗೆ ಅನುಮತಿ ನೀಡಲಾಗಿದೆ. 136 ಕೋಟಿ ರುಪಾಯಿ ವೆಚ್ಚದಲ್ಲಿ ಕೈಗಾರಿಕಾ ಉಪನಗರಗಳನ್ನು ಸ್ಥಾಪಿಸಲು ಸಹ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯದ ಯಾವ ಭಾಗದಲ್ಲಿ ಯಾವ ಕೈಗಾರಿಕೆ ಸ್ಥಾಪಿಸಿದರೆ ಹೆಚ್ಚು ಲಾಭದಾಯಕ ಎಂಬ ಬಗ್ಗೆ ಅರಿಯಲು ವಿಶೇಷ ಯೋಜನೆ ಸಿದ್ಧಪಡಿಸಲಾಗುವುದೂ ಎಂದೂ ದೇಶಪಾಂಡೆ ಅವರು ತಿಳಿಸಿದರು.

ಅಭಿವೃದ್ಧಿ ಕುಂಠಿತಗೊಂಡಿಲ್ಲ : ರಾಜ್‌ ಅಪಹರಣದ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಪ್ರತಿಪಕ್ಷದ ಧುರೀಣರು ಮಾಡುತ್ತಿರುವ ಆಕ್ಷೇಪದಲ್ಲಿ ಅರ್ಥವೇ ಇಲ್ಲ. ರಾಜ್ಯದ ಅಭಿವೃದ್ಧಿಕಾರ್ಯಗಳು ಸುಗಮವಾಗಿ ಸಾಗಿವೆ. ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+