ಬೆಂಗಳೂರನ್ನು ಮತ್ತೆ ಉದ್ಯಾನ ನಗರಿ ಮಾಡುವ ಪ್ರಯತ್ನ ಆರಂಭ
ಬೆಂಗಳೂರು : ಬೆಂಗಳೂರು ಉದ್ಯಾನ ನಗರಿ ಎಂಬ ಖ್ಯಾತಿಗೆ ಪಾತ್ರವಾಗಿತ್ತು. ಈಗ ಇದು ಮಾಲಿನ್ಯ ನಗರಿ ಎಂದೇ ಕುಖ್ಯಾತಿ ಪಡೆಯುತ್ತಿದೆ. ಇದನ್ನು ಮನಗಂಡಿರುವ ಬೆಂಗಳೂರು ಮಹಾನಗರ ಪಾಲಿಕೆ ನಗರಕ್ಕೆ ಮತ್ತೆ ಉದ್ಯಾನ ನಗರಿ ಎಂಬ ಖ್ಯಾತಿಯನ್ನು ಮರಳಿ ತಂದು ಕೊಡಲು ನಗರದ ಸುಮಾರು 432 ಉದ್ಯಾನಗಳನ್ನು ಏಳೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
432 ಉದ್ಯಾನಗಳ ಪೈಕಿ ನೂರು ಉದ್ಯಾನಗಳನ್ನು ಈ ವರ್ಷವೇ ಅಭಿವೃದ್ಧಿಪಡಿಸಲೂ ತೀರ್ಮಾನಿಸಲಾಗಿದೆ. ಮಂಗಳವಾರ ಬೆಳಗ್ಗೆ ನಗರ ಸಂಚಾರ ಮಾಡಿದ ಮೇಯರ್ ರಾಮಚಂದ್ರಪ್ಪ ಹಾಗೂ ಆಯುಕ್ತ ಕೆ. ಜೈರಾಜ್ ಅವರು ನಗರದ ಪಾರ್ಕುಗಳ ಸ್ಥಿತಿಗತಿಯ ಅಧ್ಯಯನದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು.
ನಗರದಲ್ಲಿ ಉದ್ಯಾನ ಎಂದು ಗುರುತಿಸಲಾಗಿರುವ ಸ್ಥಳಗಳು ಖಾಲಿಯಾಗಿ ಇಲ್ಲವೇ ಒತ್ತುವರಿಯಾಗಿ ಅಥವಾ ಅಭಿವೃದ್ಧಿ ಕಾಣದೆ ಇರುವುದನ್ನು ಪಾಲಿಕೆ ಗುರುತಿಸಿದೆ. ಹೀಗೆ ಗುರುತಿಸಲಾಗಿರುವ ಉದ್ಯಾನಗಳಿಗೆ ತಂತಿ ಬೇಲಿ ಹಾಕಿ, ಮೂಲಭೂತ ಸೌಕರ್ಯಗಳಾದ ನೀರು, ವಿದ್ಯುತ್ ಸಂಪರ್ಕ ಕಲ್ಪಿಸಿ ಸಂರಕ್ಷಿಸುವ ಬಗ್ಗೆ ನಿರ್ಧರಿಸಲಾಗಿದೆ. ಆದ್ಯತೆಯ ಮೇರೆಗೆ ಈ ಕಾರ್ಯ ಕೈಗೆತ್ತಿಕೊಳ್ಳುವ ಯೋಜನೆಯನ್ನೂ ಹಾಕಿಕೊಂಡಿದೆ.
ಈ ಸಾಲಿನಲ್ಲಿ ಕೆಲವು ಉದ್ಯಾನಗಳನ್ನು ಮೇಲ್ದರ್ಜೆಗೆ ಏರಿಸುವ, ಉದ್ಯಾನಗಳಲ್ಲಿ ಗಿಡ ನೆಡುವ ಹಾಗೂ ಸಂರಕ್ಷಿಸುವ ವಿವಿಧ ಯೋಜನೆಗಳನ್ನು ಜೈರಾಜ್ ಪತ್ರಕರ್ತರಿಗೆ ವಿವರಿಸಿದರು. ಉದ್ಯಾನಗಳನ್ನು ಸಿಂಗರಿಸಿ, ಕಾವಲುಗಾರರನ್ನು ನೇಮಿಸುವ ಹಾಗೂ ಕೆಲವು ಉದ್ಯಾನಗಳಲ್ಲಿ ಕಾರಂಜಿಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದೂ ಅವರು ಹೇಳಿದರು.
ನಗರದ ಕೆಲವು ಉದ್ಯಾನಗಳನ್ನು ಅಭಿವೃದ್ಧಿ ಪಡಿಸಿ ನಿರ್ವಹಣೆ ಮಾಡಲು ಇನ್ಫೋಸಿಸ್, ವಿಪ್ರೋ ಮುಂತಾದ ಸಂಸ್ಥೆಗಳು ಮುಂದೆ ಬಂದಿವೆ. 32 ಉದ್ಯಾನಗಳನ್ನು ನಿರ್ವಹಣೆಗಾಗಿ ಖಾಸಗಿ ಕಂಪನಿಗಳಿಗೆ ದತ್ತು ನೀಡಲಾಗಿದೆ ಎಂದು ಮೇಯರ್ ಹೇಳಿದರು.
ಮಾದರಿ ಉದ್ಯಾನದ ಪ್ರಶಂಸೆ : ಹನುಮಂತನಗರ ವಾರ್ಡ್ನಲ್ಲಿ ಹರಿಹರ ಗುಡ್ಡದ ಬಳಿ ಇರುವ ಉದ್ಯಾನಕ್ಕೆ ಸಂಗೀತ ಕಾರಂಜಿಯ ಮೆರುಗು ನೀಡಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುವ ಪಾಲಿಕೆಯ ಸದಸ್ಯ ಕೆ. ಚಂದ್ರಶೇಖರ್ ಅವರನ್ನು ಮೇಯರ್ ಹಾಗೂ ಆಯುಕ್ತರು ಮುಕ್ತ ಕಂಠದಿಂದ ಪ್ರಶಂಸಿಸಿದರು. ಉದ್ಯಾನವನ್ನು ಅಭಿವೃದ್ಧಿಪಡಿಸುವ ಪಾಲಿಕೆಯ ಜತೆ ಸಾರ್ವಜನಿಕರು ಕೈಜೊಡಿಸುವಂತೆ ಅವರು ಮನವಿ ಮಾಡಿದರು.
ಅಲಸೂರು ಕೆರೆ ಅಭಿವೃದ್ಧಿಗೆ ಕೇಂದ್ರಕ್ಕೆ ಮನವಿ : ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾಗಿರುವ ಐತಿಹಾಸಿಕ ಅಲಸೂರು ಕೆರೆಯನ್ನು ಅಭಿವೃದ್ಧಿಪಡಿಸಲು ಮತ್ತು ಅದನ್ನು ಸೂಕ್ತವಾಗಿ ನಿರ್ವಹಿಸಲು ಹತ್ತು ಕೋಟಿ ರುಪಾಯಿಗಳ ನೆರವು ನೀಡುವಂತೆ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಟಿ.ಆರ್. ಬಾಲು ಅವರಿಗೆ ಮೇಯರ್ ರಾಮಚಂದ್ರಪ್ಪ ಮನವಿ ಮಾಡಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications