ಕೇಂದ್ರದ ಕೃಷಿ ನೀತಿಗೆ ರಾಜ್ಯದ ವಿರೋಧ ಸಂಭವ
ಬೆಂಗಳೂರು: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶ್ವ ವಾಣಿಜ್ಯ ಸಂಘಟನೆ ಜೊತೆ ಮಾಡಿಕೊಂಡಿರುವ ಒಪ್ಪಂದಕ್ಕೆ ಕರ್ನಾಟಕ ತನ್ನ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದೆ.
ಒಪ್ಪಂದದಿಂದ ಭಾರತದ ಕೃಷಿ ಕ್ಷೇತ್ರಕ್ಕೆ ತೀವ್ರ ತೊಂದರೆಯುಂಟಾಗಲಿದೆ ಎಂಬ ಅಭಿಪ್ರಾಯಕ್ಕೆ ಬರಲಾಗಿದ್ದು, ರಾಜ್ಯದ ಕೃಷಿ ಸಚಿವ ಟಿ. ಬಿ. ಜಯಚಂದ್ರ ಅವರು ಈ ಸಂಬಂಧ ಚರ್ಚಿಸಲು ದಕ್ಷಿಣ ಮತ್ತು ಪಶ್ಚಿಮ ರಾಜ್ಯಗಳ ಕೃಷಿ ಸಚಿವರ ಸಭೆ ಕರೆದಿದ್ದಾರೆ.
ಬುಧವಾರ ದೆಹಲಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ರಾಜ್ಯಗಳಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತ ಕುರಿತು ಚರ್ಚೆ ನಡೆಸಲಾಗುವುದು. ವಿಶ್ವ ವಾಣಿಜ್ಯ ಸಂಘಟನೆಯ ಜೊತೆಗಿನ ಒಪ್ಪಂದದ ಹಿನ್ನಲೆಯಲ್ಲಿ ಹೊಸ ರಾಷ್ಟ್ರೀಯ ಕೃಷಿ ನೀತಿ ಸಂಬಂಧ ಕೇಂದ್ರ ಕೃಷಿ ಸಚಿವ ನಿತೀಶ್ಕುಮಾರ್ ಅವರು ಕರೆದಿರುವ ಸಭೆಗೆ ಒಂದು ದಿನ ಈ ಮುಂಚೆ ಸಭೆ ನಡೆಯುತ್ತಿದೆ.
ಸಭೆಗೆ ಗೋವಾ ಮತ್ತು ಮಹಾರಾಷ್ಟ್ರಗಳ ಕೃಷಿ ಮಂತ್ರಿಗಳನ್ನು ಆಹ್ವಾನಿಸಲಾಗಿದ್ದು, ಕುಸಿಯುತ್ತಿರುವ ಕೃಷಿ ಉತ್ಪನ್ನಗಳ ಬೆಲೆಯನ್ನು ತಡೆಯುವ ಕುರಿತು ಚರ್ಚಿಸಲಾಗುವುದು. ಒಪ್ಪಂದದ ಕುರಿತು ರಾಜ್ಯಗಳ ನಿಲುವು ವಿವರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುವುದುದೆಂದು ಸಚಿವ ಜಯಚಂದ್ರ ತಿಳಿಸಿದ್ದಾರೆ.
ಒಡಂಬಡಿಕೆಯಿಂದ ಹಿಂದೆ ಸರಿಯಲು ಒತ್ತಾಯ : ರಾಷ್ಟ್ರದ ಕೃಷಿ ಕ್ಷೇತ್ರದ ಹಿತದೃಷ್ಟಿಯಿಂದ ಒಡಂಬಡಿಕೆಯಿಂದ ಹಿಂದೆ ಸರಿಯಲು ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು. ಆಹಾರ ಮತ್ತು ಕೃಷಿ ಸಂಘಟನೆಯ ಮಾಜಿ ಅಧಿಕಾರಿ ಪ್ರೇಮನಾಥ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರಕಾರ ಈಗಾಗಲೇ ಸಮಿತಿಯನ್ನು ನೇಮಿಸಲಾಗಿದ್ದು, ಸಮಿತಿಯು ವಿಶ್ವ ವಾಣಿಜ್ಯ ಸಂಘಟನೆಯ ಜೊತೆಗಿನ ಒಡಂಬಡಿಕೆ ಮತ್ತು ಹೊಸ ಕೃಷಿ ನೀತಿಗಳ ಬಗ್ಗೆ ಅಧ್ಯಯನ ನಡೆಸಲಿದೆ. ನಂತರ ರಾಜ್ಯ ತನ್ನ ಅಭಿಪ್ರಾಯ ಮಂಡಿಸಲಿದೆ ಎಂದು ಹೇಳಿದ್ದಾರೆ.
ಎಲ್ಲ ರಾಜ್ಯಗಳಿಗೆ ಸಂಬಂಧಿಸಿದಂತೆ ಸಮಾನ ಅಭಿಪ್ರಾಯ ರೂಪಿಸುವುದು ಈ ಸಭೆಯ ಉದ್ದೇಶ. ಇದಕ್ಕಾಗಿ ಒಂದೇ ವೇದಿಕೆಯಡಿ ಸೇರುತ್ತಿದ್ದೇವೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ ಜೋಳದ ಬೆಲೆ ಕುಸಿತಕ್ಕೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಕೃಷಿ ಮೇಲೆ ಸಂಪೂರ್ಣ ಅವಲಂಭಿತವಾಗಿರುವ ರೈತರು ಕೃಷಿಗಾಗಿ ಹಾಕಿರುವ ಖರ್ಚು ಸಿಗದೆ ಒದ್ದಾಡುತ್ತಿದ್ದಾರೆ ಆದ್ದರಿಂದ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications