Get Updates
Get notified of breaking news, exclusive insights, and must-see stories!

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ - ನನಸಾಗುವ ಕಾಲ ಹತ್ತಿರ

ಬೆಂಗಳೂರು : ದೇವನಹಳ್ಳಿ ಸಮೀಪ ನಿರ್ಮಿಸಲುದ್ದೇಶಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂಡಳಿ ಅತಿ ಶೀಘ್ರದಲ್ಲೇ ಅನುಮತಿ ನೀಡಲಿದೆ ಎಂಬ ವಿಶ್ವಾಸವನ್ನು ಕೇಂದ್ರ ನಾಗರಿಕ ವಿಮಾನ ಯಾನ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ಟಿ.ಎ. ಜಾನ್‌ ವ್ಯಕ್ತಪಡಿಸಿದ್ದಾರೆ.

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಾಗಿರುವ ಭೂಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಈಗ ಕಾಮಗಾರಿಯನ್ನು ಯಾವ ಸಂಸ್ಥೆಗೆ ಒಪ್ಪಿಸ ಬೇಕೆಂಬ ಬಗ್ಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ ಎಂದು ಅವರು ಹೇಳಿದರು. ನಿಲ್ದಾಣ ನಿರ್ಮಾಣ ಕಾರ್ಯವನ್ನು ನವೆಂಬರ್‌ 1ರಿಂದ ಆರಂಭಿಸಲು ಉದ್ದೇಶಿಸಲಾಗಿದೆ, ಇದಕ್ಕೆ ಕೇಂದ್ರ ಪರಿಸರ ಇಲಾಖೆ ಅನುಮತಿ ದೊರಕ ಬೇಕು ಎಂದು ಅವರು ಹೇಳಿದರು.

ವಿಮಾನ ನಿಲ್ದಾಣಕ್ಕಾಗಿ 4276 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಪ್ರತಿ ಎಕರೆಗೆ 5 ಲಕ್ಷ ರುಪಾಯಿಯಂತೆ ಪರಿಹಾರ ನೀಡಬೇಕಾಗಿದೆ ಎಂದು ಸಚಿವರು ಹೇಳಿದರು. ಈ ಕಾರ್ಯಕ್ಕಾಗಿ ವಶಪಡಿಸಿಕೊಂಡಿರುವ ಭೂಮಿಯಲ್ಲಿ 1368 ಎಕರೆ ಅರಣ್ಯ ಭೂಮಿಯೂ ಇದೆ ಎಂದು ಅವರು ತಿಳಿಸಿದರು.

ಬಳ್ಳಾರಿ, ಹಾಸನ, ಮೈಸೂರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಅಭಿವೃದ್ಧಿಪಡಿಸುವ ಕಾರ್ಯಕ್ರಮ ಇದ್ದು, ಮೈಸೂರು, ಬೆಳಗಾವಿ, ಮಂಗಳೂರು ಹಾಗೂ ಹುಬ್ಬಳ್ಳಿಗೆ ವಿಮಾನಯಾನ ಆರಂಭಿಸಲು ಖಾಸಗಿಯವರು ಮುಂದಾದರೆ ಅವರಿಗೆ ಅನುಮತಿ ನೀಡಲಾಗುವುದು, ಈಗಾಗಲೇ ಕೆಲವು ಖಾಸಗಿ ಸಂಸ್ಥೆಗಳು ಈ ಬಗ್ಗೆ ಆಸಕ್ತಿ ತೋರಿವೆ ಎಂದೂ ಅವರು ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+