ಟಾಡಾ: 18ರಂದು ಸುಪ್ರೀಂಕೋರ್ಟ್ ವಿಚಾರಣೆ ಸಾಧ್ಯತೆ
ಬೆಂಗಳೂರು : ಟಾಡಾ ಬಂದಿಗಳ ಬಿಡುಗಡೆಗೆ ಸರ್ವೋನ್ನತ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ತೆರವಿಗೆ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರತಿ ಪ್ರಮಾಣ ಪತ್ರದ ಮೇಲಿನ ವಿಚಾರಣೆ 18ರಂದು ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದ್ದಾರೆ.
ರಾಜ್ ಬಿಡುಗಡೆ ಪ್ರಕ್ರಿಯೆಯಲ್ಲಿ ವೀರಪ್ಪನ್ ಷರತ್ತುಗಳನ್ನು ಒಪ್ಪಿಕೊಂಡ ರಾಜ್ಯದ ನಿಲುವನ್ನು ಸಮರ್ಥಿಸಿಕೊಂಡ ಸಚಿವರು ರಾಜ್ ಅಪಹರಣ ಬಿಕ್ಕಟ್ಟು ಮುಂದುವರಿದರೆ ಕರ್ನಾಟಕ - ತಮಿಳುನಾಡು ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕೈಮೀರುವ ಸಾಧ್ಯತೆ ಇರುವುದನ್ನು ಹಾಗೂ ಎರಡೂ ರಾಜ್ಯಗಳ ಆಸ್ತಿ -ಪಾಸ್ತಿಗೆ ಉಂಟಾಗ ಬಹುದಾದ ಹಾನಿಯ ಬಗ್ಗೆ ಪ್ರತಿ ಪ್ರಮಾಣಪತ್ರದಲ್ಲಿ ಅರಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
1984ರಿಂದಲೂ ವೀರಪ್ಪನ್ನನ್ನು ಬಂಧಿಸಲು ಸರಕಾರ ಕೈಗೊಂಡಿರುವ ಎಲ್ಲ ಕ್ರಮ ಹಾಗೂ ಅದರಿಂದ ಉಂಟಾದ ಅನಾಹುತಗಳೆಲ್ಲದರ ವಿವರಣೆಯನ್ನೂ ಮನವಿ ಒಳಗೊಂಡಿದೆ ಎಂದು ಅವರು ತಿಳಿಸಿದರು.
ನಂಜನಗೂಡಿಗೆ ರಾಜ್ ಕುಟುಂಬ : ರಾಜ್ ಅಪಹರಣವಾದ ದಿನದಿಂದಲೂ ಹಲವು ದೇವರುಗಳಿಗೆ ಹರಕೆ ಹೊತ್ತಿರುವ ರಾಜ್ಕುಮಾರ್ ಕುಟುಂಬದವರು ಗುರುವಾರ ನಂಜನಗೂಡಿನ ಶ್ರೀಕಂಠನ ಸನ್ನಿಧಿಗೆ ತೆರಳಿದ್ದಾರೆ. ರಾಜ್ ಬಿಡುಗಡೆಗೆ ಅನುಗ್ರಹಿಸುವಂತೆ ನಂಜುಂಡೇಶ್ವರನನ್ನು ಪ್ರಾರ್ಥಿಸಲು ನಂಜನಗೂಡಿಗೆ ಹೊರಟ ಅವರು, ಶ್ರೀ ಚಾಮುಂಡಮ್ಮನವರಿಗೂ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸೋಮವಾರ ಗೋಪಾಲ್ ಮತ್ತೆ ಕಾಡಿಗೆ : ಈ ಮಧ್ಯೆ ರಾಜ್ಕುಮಾರ್ ಅವರನ್ನು ವೀರಪ್ಪನ್ನಿಂದ ಬಿಡಿಸಿಕೊಂಡು ಬರಲು ಸೋಮವಾರ ಗೋಪಾಲ್ ಅವರು ನಾಲ್ಕನೆ ಬಾರಿಗೆ ಸಂಧಾನಕ್ಕಾಗಿ ಕಾಡಿಗೆ ತೆರಳಲಿದ್ದಾರೆ ಎಂದು ಚೆನ್ನೈ ಮೂಲಗಳು ತಿಳಿಸಿವೆ. ಟಾಡಾ ಬಂದಿಗಳ ಬಿಡುಗಡೆ ಸಂಬಂಧ ಸುಪ್ರೀಂಕೋರ್ಟ್ನಲ್ಲಿರುವ ಅರ್ಜಿಯ ವಿಚಾರಣೆ ಬಹುತೇಕ ಸೋಮವಾರ ನಡೆಯುವ ಸಾಧ್ಯತೆ ಇದ್ದು, ಫಲಶ್ರುತಿ ತಿಳಿದ ನಂತರ ಗೋಪಾಲ್ ಕಾಡಿಗೆ ಹೋಗುವ ಸಂಭವ ಇದೆ.
ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರೊಂದಿಗೆ ಕೃಷ್ಣ ಚರ್ಚೆ: ಬುಧವಾರ ಸಂಜೆ ದೆಹಲಿಗೆ ತೆರಳಿದ ಮುಖ್ಯಮಂತ್ರಿ ಕೃಷ್ಣ ಅವರು ಗುರುವಾರ ಬೆಳಗ್ಗೆ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರುಗಳೊಂದಿಗೆ ರಾಜ್ ಬಿಡುಗಡೆಯ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಸಚಿವರುಗಳಾದ ಧನಂಜಯ ಕುಮಾರ್, ಶ್ರೀನಿವಾಸ ಪ್ರಸಾದ್ ಸಭೆಯಲ್ಲಿ ಪಾಲ್ಗೊಂಡಿದ್ದರೆ, ಅನಂತಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಗೊತ್ತಾಗಿದೆ. ವೀರಪ್ಪನ್ ಅಟ್ಟಹಾಸವನ್ನು ಮಟ್ಟಹಾಕಲು ಎನ್.ಎಸ್.ಜಿ. ಕಮಾಂಡೋ ಪಡೆಯ ನೆರವು ಬಳಸಿಕೊಳ್ಳುವಂತೆ ಕೇಂದ್ರ ಸರಕಾರ ಮಾಡಿದ ಸಲಹೆಯನ್ನು ರಾಜ್ಯ ಸರಕಾರ ಬಹಳ ನಮ್ರವಾಗಿ ತಿರಸ್ಕರಿಸಿದೆ. ಬಲಪ್ರಯೋಗಕ್ಕೆ ಕೈಹಾಕಿದರೆ, ರಾಜ್ ಹಾಗೂ ಮತ್ತಿತರ ಪ್ರಾಣಕ್ಕೆ ಸಂಚಕಾರ ಒದಗಬಹುದು ಎಂಬ ಭೀತಿಯಿಂದ ಕೇಂದ್ರದ ಈ ಸಲಹೆಯನ್ನು ಪುರಸ್ಕರಿಸದಿರಲು ರಾಜ್ಯ ತೀರ್ಮಾನಿಸಿತೆಂದು ತಿಳಿದುಬಂದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications