ಭಯೋತ್ಪಾದನೆ ಪೆಡಂಭೂತ ಹತ್ತಿಕ್ಕಲು ವೇದಿಕೆ ಸಜ್ಜು
ವಾಷಿಂಗ್ಟನ್ : ದೇಶದೊಳಗೆ ನಡೆಯುತ್ತಿರುವ ಹಾಗೂ ಗಡಿಯಾಚೆಯ ಭಯೋತ್ಪಾದನೆ ಹತ್ತಿಕ್ಕಲು ಹೊಸದಾಗಿ ಮಾತುಕತೆಯನ್ನು ಆರಂಭಿಸಲು ಭಾರತ ಮತ್ತು ಅಮೆರಿಕಾ ರಾಷ್ಟ್ರಗಳು ಶನಿವಾರ ಸಮ್ಮತಿಸಿವೆ. ಈ ಸಂಬಂಧ ಸೆಪ್ಟೆಂಬರ್ ಅಂತ್ಯದಲ್ಲಿ ನವದೆಹಲಿಯಲ್ಲಿ ಮಾತುಕತೆ ನಡೆಸಲು ತೀರ್ಮಾನಿಸಿರುವುದಾಗಿ ಎರಡೂ ರಾಷ್ಟ್ರಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.
ಭಯೋತ್ಪಾದನೆ ಎಂಬ ಪೆಡಂಭೂತವನ್ನು ಧ್ವಂಸಮಾಡಲು ಉಭಯ ರಾಷ್ಟ್ರಗಳು ಹಾಲಿ ನಡೆಸುತ್ತಿರುವ ಪ್ರಯತ್ನವನ್ನು ಮತ್ತಷ್ಟು ಬಲಗೊಳಿಸಬೇಕು ಎಂದು ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ವಾಜಪೇಯಿ ಅವರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಅವ್ಯಾಹತವಾಗಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾರತ ಹಾಗೂ ಅಮೆರಿಕಾ ದೇಶವನ್ನೇ ಗುರಿಯಾಗಿಟ್ಟುಕೊಳ್ಳಲಾಗಿದೆ. ಇಂತಹ ಪ್ರಯತ್ನಗಳನ್ನು ದಮನಮಾಡಲು ದ್ವಿಪಕ್ಷೀಯ ಸಂಬಂಧ ವರ್ಧನೆ ಆಗಬೇಕು ಎಂದು ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಮೆರಿಕದ ಅಧ್ಯಕ್ಷ ಬಿಲ್ಕ್ಲಿಂಟನ್ ಅವರ ಭೇಟಿಯ ಕೊನೆಯ ಘಟ್ಟದಲ್ಲಿ ಬಿಡುಗಡೆ ಮಾಡಲಾಗಿರುವ ಸಂಯುಕ್ತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಭಾರತ ನಿಲುವಿಗೆ ಬೆಂಬಲ : ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ನಿಲ್ಲದ ರಕ್ತಪಾತ ಹಾಗೂ ಹಿಂಸಾಚಾರದ ಬಗ್ಗೆ ಕೂಡ ಅಮೆರಿಕ ತನ್ನ ಕಳಕಳಿ ವ್ಯಕ್ತಪಡಿಸಿದೆ. ಪಾಕಿಸ್ತಾನದ ಕೆಲವು ಭಯೋತ್ಪಾದಕ ಶಕ್ತಿಗಳ ಕೈವಾಡದ ಬಗ್ಗೆ ಸಹ ಕಳವಳ ವ್ಯಕ್ತವಾಗಿದೆ. ಕಾಶ್ಮೀರ ಸಮಸ್ಯೆಗೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಅಮೆರಿಕಾ ಬೆಂಬಲಿಸಿದೆ.
ಶಾಂತಿ ಮಂತ್ರ ಜಪಿಸುವ ಭಾರತವನ್ನು ಬೆಂಬಲಿಸಿರುವ ಅಮೆರಿಕಾ ದಕ್ಷಿಣ ಏಷ್ಯಾ ಭೂಭಾಗದಲ್ಲಿನ ಸಮಸ್ಯೆಗೆ ಶಸ್ತ್ರಾಸ್ತ್ರಗಳಿಂದ ಮಾತ್ರ ಪರಿಹಾರ ಸಾಧ್ಯ ಎಂಬ ವಾದವನ್ನು ಅಲ್ಲಗಳೆದಿದೆ. ಇದರಿಂದಾಗಿ ಕಾಶ್ಮೀರ ಸಮಸ್ಯೆಗೆ ಶಾಂತಿ ಮಾತುಕತೆಯಿಂದ ಮಾತ್ರ ಪರಿಹಾರ ದೊರಕಲು ಸಾಧ್ಯ ಎಂಬ ಭಾರತದ ನಿಲುವಿಗೆ ಅಮೆರಿಕಾದ ಸಂಪೂರ್ಣ ಬೆಂಬಲ ದೊರೆತಂತಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications