ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೀದರ್ ಅತಿವೃಷ್ಟಿ ಹೆಚ್ಚಿನ ಪರಿಹಾರಕ್ಕೆ ಆಗ್ರಹ
ಬೆಂಗಳೂರು : ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 25 ಕೋಟಿ ರುಪಾಯಿಗಳ ಆಸ್ತಿ ಪಾಸ್ತಿ ಹಾಗೂ ಬೆಳೆ ಹಾನಿ ಆಗಿದ್ದು ಸರಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ರಾಜ್ಯ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ.
ಸರಕಾರ ಈಗ ಕೇವಲ 2 ಕೋಟಿ ರುಪಾಯಿಗಳ ಪರಿಹಾರ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿಗೆ ಈ ಪರಿಹಾರ ಏನೇನೂ ಸಾಲದು. ಜಿಲ್ಲೆಯಲ್ಲಿ ಉಂಟಾಗಿರುವ ಅನಾಹುತ ಅಧ್ಯಯನ ಮಾಡಿ ಹೆಚ್ಚಿನ ಪರಿಹಾರ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು. ಬಾಗಲಕೋಟೆ ಸಂತ್ರಸ್ತರಿಗೆ ಕೂಡ ಸರಿಯಾದ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು ಅವರು ಆರೋಪಿಸಿದರು.
Comments
Story first published: Saturday, September 16, 2000, 5:30 [IST]