ಬೆಂಗಳೂರಲ್ಲಿ ಪೊಲೀಸ್ ಸಿಬ್ಬಂದಿಯ ಕೊರತೆ : ಮಡಿಯಾಳ್
ಬೆಂಗಳೂರು : ನಗರದಲ್ಲಿ ಹೆಚ್ಚುತ್ತಿರುವ ಸುಲಿಗೆ - ಕಳ್ಳತನ ನಿಗ್ರಹಿಸಲು ಸಾಕಷ್ಟು ಪೊಲೀಸ್ ಸಿಬ್ಬಂದಿ ಇದ್ದಾರೆ ಎಂದು ನಿಮಗನ್ನಿಸುತ್ತದೆಯೇ ? ಇಲ್ಲ ಎಂದು ನೀವು ಭಾವಿಸಿದರೆ ಅದರಲ್ಲಿ ತಪ್ಪೇನಿಲ್ಲ. ನಗರ ಪೊಲೀಸ್ ಆಯುಕ್ತರೂ ಹೆಚ್ಚೂ ಕಡಿಮೆ ಈ ಮಾತನ್ನೇ ಬೇರೆ ಶಬ್ದಗಳಲ್ಲಿ ಆಡಿದ್ದಾರೆ.
ಮಡಿಯಾಳ್ ಅವರ ರೀತ್ಯ ಬೆಂಗಳೂರು ನಗರಕ್ಕೆ 1500ರಿಂದ 2000 ಪೊಲೀಸ್ ಸಿಬ್ಬಂದಿಯ ಅಗತ್ಯ ಇದೆ. ಈ ಸಂಬಂಧ ಶೀಘ್ರದಲ್ಲೇ 500 ಸಿವಿಲ್ ಪೇದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ರಾಜ್ಯ ಸರಕಾರ ಸಹ ಈ ನೇಮಕಾತಿಗೆ ತನ್ನ ಅನುಮೋದನೆ ನೀಡಿದೆ. ಆದರೆ, ಗ್ರಾಮೀಣ ಕೃಪಾಂಕದ ವಿವಾದದಿಂದಾಗಿ ನೇಮಕಾತಿ ವಿಳಂಬವಾಗಿದೆ ಎಂದೂ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಗ್ರಾಮೀಣ ಕೃಪಾಂಕದ ಸಮಸ್ಯೆ ಪರಿಹಾರವಾದ ತತ್ಕ್ಷಣವೇ 500 ಪೇದೆಗಳ ನೇಮಕ ನಡೆಯಲಿದೆ. ನಗರ ಹೊರವಲಯಗಳಲ್ಲಿ ಪೊಲೀಸ್ ಸಿಬ್ಬಂದಿಯ ಸಂಖ್ಯೆ ಹೆಚ್ಚಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ನಗರದಲ್ಲಿ ಇನ್ನೂ 8 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಪ್ರಸ್ತಾವ ಸರ್ಕಾರದ ಮುಂದಿದೆ. ಇದಕ್ಕೆ ಇನ್ನೂ ಅಂಗೀಕಾರ ದೊರೆತಿಲ್ಲ. ತಾವು ಪೊಲೀಸ್ ಕಮೀಷನರ್ ಆಗಿ ಅಧಿಕಾರ ಪಡೆದ ತರುವಾಯ ಯಾವುದೇ ಹೊಸ ಠಾಣೆಗೆ ಪ್ರಸ್ತಾವನೆ ಕಳಿಸಿಲ್ಲ. ಹಿಂದಿನ ಆಯುಕ್ತರು ಕಳುಹಿಸಿದ್ದ 8 ಠಾಣೆಗಳ ಪ್ರಸ್ತಾವನೆ ಮಂಜೂರಾತಿಗಾಗಿ ಕಾಯುತ್ತಿದೆ ಎಂದು ಹೇಳಿದರು.
ನಗರದಲ್ಲಿ ಹೆಚ್ಚುತ್ತಿರುವ ಸುಲಿಗೆ - ದರೋಡೆಗಳ ಬಗ್ಗೆ ಗಮನ ಸೆಳೆದಾಗ, ಬೆಂಗಳೂರು ನಗರದಲ್ಲಿ ಹಾಲಿ 86 ಪೊಲೀಸ್ ಠಾಣೆಗಳಿವೆ. ರಾಷ್ಟ್ರೀಯ ಪೊಲೀಸ್ ಆಯೋಗದ ಶಿಫಾರಸಿನ ರೀತ್ಯ ನಗರಕ್ಕೆ ಇನ್ನೂ 22 ಪೊಲೀಸ್ ಠಾಣೆಗಳ ಅಗತ್ಯ ಇದೆ ಎಂದು ಮಡಿಯಾಳ್ ತಿಳಿಸಿದರು.
ಹೊಯ್ಸಳಕ್ಕೂ ಸಿಬ್ಬಂದಿ ಕೊರತೆ : ನಗರದಲ್ಲಿ 56 ಹೊಯ್ಸಳ ವಾಹನಗಳಿವೆ. ಒಂದು ವಾಹನಕ್ಕೆ ತಲಾ ಐವರು ಸಿಬ್ಬಂದಿ ಎಂದರೂ ಮೂರು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲು ಕನಿಷ್ಠ 15 ಪೊಲೀಸ್ ಸಿಬ್ಬಂದಿ ಅಗತ್ಯ ಇದೆ. ಆದರೆ, ನಗರದಲ್ಲಿ ಪೊಲೀಸ್ ಸಿಬ್ಬಂದಿಯ ಕೊರತೆ ಇದೆ ಎಂದು ಅವರು ಹೇಳಿದರು. ನಗರದ ಜನಸಂಖ್ಯೆಗನುಗುಣವಾಗಿ ಪೊಲೀಸ್ ಸಿಬ್ಬಂದಿ ಇಲ್ಲ ಎಂಬುದನ್ನು ಅವರು ಒಪ್ಪಿಕೊಂಡರು.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications