ಒಳಚರಂಡಿ ವ್ಯವಸ್ಥೆಗೆ ಹಿಡಿದ ಕನ್ನಡಿ
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಆಯಿತು ಎಂದು ಹೇಳಿದ್ದೆವಲ್ಲವೇ. ಬೆಂಗಳೂರಿನಲ್ಲಿ ಬಿದ್ದಿದ್ದು ಕೇವಲ 3 ಸೆಂಟಿ ಮೀಟರ್ ಮಳೆ ಮಾತ್ರ. ಆದರೂ, ಬೆಂಗಳೂರಿನಲ್ಲಿ ನಿನ್ನೆ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿನ ರಸ್ತೆಗಳೆಲ್ಲಾ ಜಲಾವೃತವಾಗಿದ್ದವು.
ಮೂರು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿತ್ತು. ನಗರದಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ, ರಸ್ತೆಯಲ್ಲಿ ನೀರು ಕೆರೆಯಂತೆ ನಿಂತಿತ್ತು. ಮೈಕೋ ಲೇಔಟ್, ಬಿಟಿಎಂ ಲೇಔಟ್, ಗಿರಿನಗರ ಮುಂತಾದ ಪ್ರದೇಶಗಳಲ್ಲಿ ಒಂದೂವರೆ ಅಡಿಯಷ್ಟು ನೀರು ರಸ್ತೆಯಲ್ಲಿ ನಿಂತಿತ್ತು. ದ್ವಿಚಕ್ರ ವಾಹನ ಚಾಲಕರಂತೂ ನೀರಿನಲ್ಲಿಯೇ ತಮ್ಮ ವಾಹನ ಓಡಿಸಲು ಹೋಗಿ ಪಟ್ಟ ಪಾಡು ಅಷ್ಟಿಷ್ಟಲ್ಲ.
ತಗ್ಗು ಪ್ರದೇಶದ ಜನರಂತೂ ಬೆಂಗಳೂರು ಮಹಾನಗರ ಪಾಲಿಕೆಗೆ ಹಿಡಿ ಶಾಪ ಹಾಕುತ್ತಿದ್ದುದು ಸಾಮಾನ್ಯವಾಗಿತ್ತು. ಬೆಂಗಳೂರಿನ ಬಹುತೇಕ ಒಳಚರಂಡಿಗಳು ಕಟ್ಟಿಕೊಂಡಿರುವ ಕಾರಣ ಜಲಮಂಡಳಿಯ ಕಚೇರಿಗಳ ಮುಂದೆ ಬುಧವಾರ ಬೆಳಗ್ಗೆ ಜನರು ದೂರು ದಾಖಲಿಸಲು ಸಾಲು ಗಟ್ಟಿ ನಿಂತಿದ್ದರು.
ಹನುಮಂತನಗರ, ಚಾಮರಾಜಪೇಟೆ, ಎನ್.ಆರ್. ಕಾಲೋನಿ, ಬನಶಂಕರಿ, ಗಿರಿನಗರ, ಯಶವಂತಪುರಗಳಲ್ಲಿ ಕನಿಷ್ಠ 10 ಮರಗಳು ನೆಲಕಚ್ಚಿದ ಕಾರಣ ಸಂಚಾರ ಕೆಲ ಕಾಲ ಸ್ತಬ್ದವಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿ, ಸಂಚಾರವನ್ನು ಸುಗಮಗೊಳಿಸಲು ಪೊಲೀಸರೊಂದಿಗೆ ಹರ ಸಾಹಸ ನಡೆಸಿದರು.
ಈ ಮಧ್ಯೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಉತ್ತರ ಒಳನಾಡಿನ ಹಲವೆಡೆ ಹಾಗೂ ಕರಾವಳಿಯ ಅಲ್ಲಲ್ಲಿ ಮಳೆ ಬಿದ್ದಿದೆ. ಮೂರ್ನಾಡಿನಲ್ಲಿ ಅತಿ ಹೆಚ್ಚು ಎಂದರೆ 8 ಸೆಂಟಿ ಮೀಟರ್ ಮಳೆ ಆಗಿದೆ. ಮಧುಗಿರಿಯಲ್ಲಿ 7 ಸೆಂಟಿ ಮೀಟರ್, ಬಂಟ್ವಾಳ, ಬನವಾಸಿ, ಚಿಕ್ಕನಾಯಕನಹಳ್ಳಿ, ಹೊಳಲ್ಕೆರೆಗಳಲ್ಲಿ 4 ಸೆಂಟಿ ಮೀಟರ್, ರಬಕವಿ, ಯಲಹಂಕ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನಲ್ಲಿ ಸರಾಸರಿ 3 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಅಲ್ಲಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಒಂದೆರಡು ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಈಗ ಬೆಂಗಳೂರಿನಲ್ಲಿ 8 ಗಂಟೆ. ಈಗಂತೂ ಗುಡುಗು, ಸಿಡಿಲು, ಮಿಂಚಿನ ಆರ್ಭಟಗಳೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಿಮ್ಮೂರಲ್ಲಿ ಹೇಗೆ ? ಮಳೆ - ಬೆಳೆ ಚೆನ್ನಾಗಿದೆಯಲ್ಲ. ಎಲ್ಲರೂ ಕ್ಷೇಮವಷ್ಟೇ?.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications