ಚಾಮರಾಜನಗರ ಜಿಲ್ಲೆಯಲ್ಲಿ ಭಾರಿ ಮಳೆ,ದ್ವೀಪವಾದ ಗ್ರಾಮಗಳು
ಮೈಸೂರು : ತಿಂಗಳ ಹಿಂದೆ ಮಳೆ ಇಲ್ಲ ಎಂದು ಕಂಗಾಲಾಗಿದ್ದ ಚಾಮರಾಜನಗರ ಜಿಲ್ಲೆಯ ಜನ. ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ತತ್ತರಿಸಿ ಹೋಗಿದ್ದಾರೆ. ವರುಣನ ಕೃಪಾವಕೃಪೆಗಳಿಂದ ನಡುಗುತ್ತಿದ್ದಾರೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಜಿಲ್ಲೆಯ ಹಲವಾರು ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಗೊಂಡಿವೆ. ನೀರಿಲ್ಲದೆ ಬಿರುಕು ಬಿಟ್ಟಿದ್ದ ಕೆರೆ, ಕಟ್ಟೆಗಳೆಲ್ಲಾ ಕೋಡಿ ಬಿದ್ದಿವೆ. ರಸ್ತೆಗಳೆಲ್ಲಾ ಹಾಳಾಗಿ, ನೀರಿನಿಂದ ತುಂಬಿ ತುಳುಕುತ್ತಿದ್ದು, ಸಂಚಾರ ಹಾಗೂ ಜನಜೀವನ ಎರಡೂ ಅಸ್ತವ್ಯಸ್ತಗೊಂಡಿವೆ.
48 ಗಂಟೆಗಳ ಹಿಂದೆ ಇಲ್ಲಿ 9.6 ಸೆಂಟಿ ಮೀಟರ್ಗಳ ದಾಖಲೆ ಮಳೆ ಸುರಿದಿದೆ. ಗುರುವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆ ರಸ್ತೆಗಳನ್ನೆಲ್ಲಾ ಆವರಿಸಿ ಜನಜೀವನಕ್ಕೆ ಭಾರಿ ಪೆಟ್ಟು ನೀಡಿತ್ತು. ಚರಂಡಿಗಳೆಲ್ಲವೂ ತುಂಬಿ ಹೊಳೆಯಂತೆ ಹರಿಯುತ್ತಿದ್ದವು. ರಸ್ತೆಯಲ್ಲಿ ಶೇಖರವಾಗುವ ನೀರು ಹೊರಹೋಗಲು ಆಸ್ಪದವೇ ಇಲ್ಲದೆ ರಸ್ತೆಗಳೆಲ್ಲ ನಾಲೆಗಳಂತೆ ತೋರುತ್ತಿದ್ದವು.
ಮದ್ದೂರು ಮಳವಳ್ಳಿಯಲ್ಲಿ ಭಾರಿ ಹಾನಿ : ಮದ್ದೂರು - ಮಳವಳ್ಳಿಗಳಲ್ಲೂ ಭಾರಿ ಮಳೆ ಬಿದ್ದಿದೆ. ರಾಮನಗರದಲ್ಲಿ ಕೂಡ ಮಳೆಯಾಗಿದೆ. ಆದರೆ, ಕಳೆದೆರಡು ದಿನಗಳ ಹಿಂದೆ ಮಳವಳ್ಳಿ ಹಾಗೂ ಮದ್ದೂರುಗಳಲ್ಲಿ ಬಿದ್ದ ಮಳೆ ಬೆಳೆ, ಆಸ್ತಿ - ಪಾಸ್ತಿಗಳಿಗೆ ಮಾಡಿದ ಹಾನಿ ಅಷ್ಟಿಷ್ಟಲ್ಲ.
ಕಿರುಗಾವಲು ಕ್ಷೇತ್ರದ ಶಾಸಕ ಡಿ.ಸಿ. ತಮ್ಮಣ್ಣನವರ ರೀತ್ಯ ಸುಮಾರು 3 ಕೋಟಿ ರುಪಾಯಿ ನಷ್ಟ ಸಂಭವಿಸಿದೆಯಂತೆ. ಶಾಸಕರು, ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಜತೆಗೂಡಿ ಮಳೆ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆ ನಡೆಸಿದರು.
ಅತಿವೃಷ್ಟಿಯಿಂದಾಗಿ ಮನೆ - ಮಾರು ಕಳೆದುಕೊಂಡಿರುವವರಿಗೆ ತುರ್ತು ನೆರವು ನೀಡಬೇಕು ಎಂದು ಹೇಳಿದ ಅವರು, ಇದಕ್ಕಾಗಿ 10 ಲಕ್ಷ ರುಪಾಯಿಗಳ ವಿಶೇಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳನ್ನು ಪ್ರಾರ್ಥಿಸಲಾಗುವುದು ಎಂದು ತಿಳಿಸಿದರು. ಅಧಿಕಾರಿಗಳ ಜತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ಅವರು ವಿವರಗಳನ್ನು ನೀಡಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications