ದಕ್ಷಿಣ ಒಳನಾಡಿನಲ್ಲಿ ಚುರುಕಾದ ಮುಂಗಾರು
ಬೆಂಗಳೂರು : ಬೆಂಗಳೂರಿನಲ್ಲಿ ಶನಿವಾರ ಬಿಸಿಲು ಸುಳಿದಾಡುತ್ತಿದೆ. ಮಳೆ ಬಿಟ್ಟಂತೆ ತೋರುತ್ತಿದೆ. ರಾತ್ರಿ ಹೇಗೋ ಏನೋ ಗೊತ್ತಿಲ್ಲ. ಬೆಳಿಗ್ಗಿನಿಂದ ವರುಣದೇವ ರೆಸ್ಟ್ ತಗೊಂಡಿದ್ದಾನೆ. ಸಂಜೆಯ ನಂತರ ಗುಡಿಗಿದರೂ ಗುಡುಗ ಬಹುದು.
ಚಾಮರಾಜ ನಗರ ಜಿಲ್ಲೆಯಲ್ಲಂತೂ ಧಾರಾಕಾರವಾಗಿ ಸುರಿದ ಮಳೆಯಿಂದ ಅನೇಕ ಹಳ್ಳಿಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನಾಲ್ಕಾರು ಅಡಿ ನೀರು ಹರಿಯುತ್ತಿದೆ. ಮನೆಗಳಿಗೆಲ್ಲಾ ನೀರು ನುಗ್ಗಿದೆ. ಮಳವಳ್ಳಿ, ಮದ್ದೂರುಗಳಲ್ಲೂ ಸಾಕಷ್ಟು ಮಳೆ ಬಿದ್ದಿದೆ.
ಅಂದಹಾಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಕರಾವಳಿಯ ಎಲ್ಲೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಬಿದ್ದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9 ಸೆಂಟಿ ಮೀಟರ್, ಚಿಕ್ಕಮಗಳೂರಿನಲ್ಲಿ 8, ಹೆಗ್ಗಡದೇವನ ಕೋಟೆ, ಅಜ್ಜಂಪುರ, ಹೊಳೆನರಸೀಪುರಗಳಲ್ಲಿ ತಲಾ 6, ಖಾನಾಪುರದಲ್ಲಿ 5, ಬ್ಯಾಡಗಿ, ಶೃಂಗೇರಿಗಳಲ್ಲಿ 4 ಸೆಂಟಿ ಮೀಟರ್, ಹೊನ್ನಂಪೇಟೆ, ತರೀಕೆರೆ, ಕಳಸ, ಶಿವಮೊಗ್ಗಗಳಲ್ಲಿ 3 ಸೆಂಟಿ ಮೀಟರ್ ಮಳೆಯಾಗಿದೆ.
ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಎಲ್ಲೆಡೆ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಬಾರಿ ಮಳೆ ಆಗುತ್ತದೆ ಎನ್ನುತ್ತದೆ ಹವಾಮಾನ ಇಲಾಖೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications