ಯಾರ ವಿರುದ್ಧ ಈ 28ರ ಕರ್ನಾಟಕ ಬಂದ್ ಹೇಳಬಲ್ಲಿರಾ ?
ಮಂಡ್ಯ : ಅಪ್ಪಾಜಿ ಅವರ ಅಪಹರಣವಾಗಿ ಇಂದಿಗೆ 57 ದಿನ ಕಳೆದಿದೆ. ಆದರೂ, ಅವರ ಬಿಡುಗಡೆಯ ಯಾವ ಸೂಚನೆಗಳೂ ಕಾಣುತ್ತಿಲ್ಲ. ಇದಕ್ಕಾಗಿಯೇ 28ರ ಕರ್ನಾಟಕ ಬಂದ್. ಈ ಬಂದ್ ಯಾರ ವಿರುದ್ಧವೂ ಅಲ್ಲ. ನಮ್ಮ ನೋವನ್ನು ಪ್ರಕಟಿಸಲಿಕ್ಕಾಗಿ ಮಾತ್ರ ಎಂದು ರಾಘವೇಂದ್ರ ರಾಜ್ಕುಮಾರ್ ಭಾನುವಾರ ಇಲ್ಲಿ ಹೇಳಿದರು.
ವರನಟ ಡಾ. ರಾಜ್ಕುಮಾರ್ ಅವರ ಅಪಹರಣದಿಂದ ಸಮಸ್ತ ಕನ್ನಡಿಗರಿಗೆ ಆಗಿರುವ ನೋವು ಈ ತಿಂಗಳ 28ರಂದು ಶಾಂತಿಯುತ ಬಂದ್ನೊಂದಿಗೆ ಪ್ರಕಟಗೊಳ್ಳಲಿದೆ ಎಂದು ಅವರು ಹೇಳಿದರು. ನಮ್ಮ ಈ ನೋವು ಕೇಂದ್ರಕ್ಕೂ ಮುಟ್ಟಿ , ಅಪ್ಪಾಜಿ ಅವರ ಬಿಡುಗಡೆಗೆ ಅವರೂ ಕಾರ್ಯೋನ್ಮುಖರಾಗಲಿ ಎಂದು ಬಂದ್ ಆಚರಿಸಲಾಗುತ್ತಿದೆ ಎಂದು ಶಿವರಾಜ್ ಕುಮಾರ್ ಹೇಳಿದರು.
ಇಲ್ಲಿನ ಸಿಲ್ವರ್ ಜ್ಯೂಬಿಲಿ ಪಾರ್ಕ್ನಲ್ಲಿ ಭಾನುವಾರ ಸಂಜೆ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವರನಟ ರಾಜ್ಕುಮಾರ್ ಅವರ ಪುತ್ರರು, ಗಲಾಟೆ ಮಾಡುವುದು ಕನ್ನಡಿಗರ ಉದ್ದೇಶವಾಗಿದ್ದರೆ, ಮೊದಲ ದಿನವೇ ಆಗುತ್ತಿತ್ತು. ನಾವು ಶಾಂತಿ ಪ್ರದರ್ಶಿಸಿದೆವು. ನಮ್ಮ ಶಾಂತಿ - ತಾಳ್ಮೆಯನ್ನೇ ಇವರು ಅಸಹಾಯಕತೆ ಎಂದು ಭಾವಿಸಿದಂತಿದೆ ಎಂದು ವಿಷಾದಿಸಿದರು.
ರಾಜ್ಕುಮಾರ್ ಅಪಹರಣದ ಹಿಂದೆ ಕಾಣದ (ರಾಜಕೀಯ) ಕೈಗಳ ಕೈವಾಡ ಇದೆ ಎಂದು ಸಾ.ರಾ. ಗೋವಿಂದು ಆರೋಪಿಸಿದರು. ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್, ಜಿಲ್ಲಾ ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಜಿ.ಟಿ. ರವೀಂದ್ರಕುಮಾರ್, ಮಧು ಬಂಗಾರಪ್ಪ, ನಿರ್ದೇಶಕ ವಾಸು ಮುಂತಾದವರು ಪಾಲ್ಗೊಂಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications