28ರ ಕರ್ನಾಟಕ ಬಂದ್ ಮೈಸೂರಿಗೆ ಅನ್ವಯಿಸುವುದಿಲ್ಲ : ಸ್ಪಷ್ಟನೆ
ಮೈಸೂರು : ರಾಜ್ ಬಿಡುಗಡೆಗೆ ಮೊನ್ನೆಯಷ್ಟೇ ಬಂದ್ ಆಚರಿಸಿದ ಮೈಸೂರು ನಗರಕ್ಕೆ ಮಾತ್ರ ಸೆ. 28ರ ಕರ್ನಾಟಕ ಬಂದ್ ಅನ್ವಯಿಸುವುದಿಲ್ಲ. 28ರಿಂದ ನಾಡಿನ ಜನತೆಯ ಒಳಿತಿಗಾಗಿ ಆಚರಿಸುವ ಮೈಸೂರು ದಸರಾ ಉತ್ಸವ ಅರಂಭವಾಗುವ ಹಿನ್ನೆಲೆಯಲ್ಲಿ , ನಾಡಹಬ್ಬಕ್ಕೆ ಅಡ್ಡಿಯುಂಟು ಮಾಡಬಾರದೆಂದು ಶಿವರಾಜ್ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಇಲ್ಲಿ ಮನವಿ ಮಾಡಿದರು.
28ರಂದು ಆರಂಭವಾಗುವ ತಾಯಿ ಚಾಮುಂಡೇಶ್ವರಿಯವರ ಪೂಜೆ - ಪುನಸ್ಕಾರಗಳಿಗೆ ಯಾವುದೇ ರೀತಿಯ ಆಡಚಣೆ ಉಂಟಾಗಬಾರದು. ನಾಡು ಹಾಗೂ ನಾಡಿನ ಜನರ ಶ್ರೇಯಸ್ಸಿಗಾಗಿ ಆಚರಿಸಲಾಗುವ ಈ ಉತ್ಸವಕ್ಕೆ ಚ್ಯುತಿಯಾಗಬಾರದು. ಈ ಹಿನ್ನೆಲೆಯಲ್ಲಿ 28ರಂದು ಅಪ್ಪಾಜಿ ಅವರ ಬಿಡುಗಡೆಗೆ ತಾಯಿ ಚಾಮುಂಡಾಂಬಿಕೆಯಲ್ಲಿ ನಾವೆಲ್ಲ ಪ್ರಾರ್ಥಿಸೋಣ. ಹಬ್ಬಕ್ಕೆ ಅಡ್ಡಿ ಮಾಡುವುದು ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.
ರಾಜ್ಕುಮಾರ್ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ, ಕನ್ನಡ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆ, ಮೈಸೂರಿಗೆ ಮಾತ್ರ ಅನ್ವಯಿಸುವುದಿಲ್ಲ ಎಂಬುದನ್ನು ಇವರು ಸ್ಪಷ್ಟಪಡಿಸಿದರು. ಸೋಮವಾರ ನಡೆಯಲಿರುವ ಮೌನ ಮೆರವಣಿಗೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು, ಮಾತನಾಡುತ್ತಿದ್ದರು.
ಏನೇ ಆದರೂ, ಪರಂಪರಾನುಗತವಾಗಿ ನಡೆಸಿಕೊಂಡು ಬರುತ್ತಿರುವ ದಸರೆಗೆ ಅಡ್ಡಿಯಾಗಬಾರದು ಎಂದು 1994ರಲ್ಲಿ ದಸರೆ ಉದ್ಘಾಟನೆ ಮಾಡಿದ ಸಂದರ್ಭದಲ್ಲಿ ರಾಜ್ಕುಮಾರ್ ಹೇಳಿದ್ದ ಮಾತುಗಳನ್ನು ಶಿವರಾಜ್ಕುಮಾರ್ ಸ್ಮರಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications