ರಾಜ್ಕುಮಾರ್ರನ್ನು ತಕ್ಷಣ ಬಿಡುವ ಬಗ್ಗೆ ವೀರಪ್ಪನ್ ಚಿಂತನೆ ?
ಚೆನ್ನೈ : ರಾಜ್ಕುಮಾರ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಕುಮಾರ್ ಅವರನ್ನು ಮಾತ್ರ ಬಿಡುಗಡೆ ಮಾಡಿ ಉಳಿದ ಮೂವರನ್ನು ತನ್ನ ವಶದಲ್ಲಿಟ್ಟುಕೊಂಡು ತನ್ನ ಬೇಡಿಕೆಗಳ ಈಡೇರಿಸಿಕೊಳ್ಳುವ ಬಗ್ಗೆ ವೀರಪ್ಪನ್ ಚಿಂತೆ ಮಾಡುತ್ತಿದ್ದಾನಂತೆ.
ಕಳೆದ ವಾರವೇ ಅನಾರೋಗ್ಯದಿಂದ ಬಳಲಿರುವ ರಾಜ್ಕುಮಾರ್ ಅವರನ್ನು ಬಿಟ್ಟು ಬಿಡುವ ನಿರ್ಧಾರವನ್ನು ವೀರಪ್ಪನ್ ಕೈಗೊಂಡಿದ್ದನಂತೆ. ಆದರೆ, ತಮಿಳು ಉಗ್ರರ ನಾಯಕ ಮಾರನ್ ಇದಕ್ಕೆ ಅಡ್ಡಿ ಬಂದನೆಂದು ಕೇರಳ ಕೌಮುದಿ ಬೆಂಗಳೂರು ಆವೃತ್ತಿ ವರದಿ ಮಾಡಿದೆ.
ರಾಜ್ಕುಮಾರ್ ಅವರಿಗೆ ಏನಾದರೂ ತೊಂದರೆ ಆದರೆ, ತನಗೆ ಉಳಿಗಾಲವಿಲ್ಲ. ಜನ ರೊಚ್ಚಿಗೆದ್ದು ಕಾಡಿಗೆ ನುಗ್ಗಿದರೆ, ತಾನು ಇಷ್ಟು ವರ್ಷದಿಂದ ಕಾಡಿನಲ್ಲಿ ಕಟ್ಟಿರುವ ಸಾಮ್ರಾಜ್ಯ ನುಚ್ಚು ನೂರಾಗುತ್ತದೆ ಎಂಬ ಕಲ್ಪನೆ ಇರುವ ವೀರಪ್ಪನ್ ರಾಜ್ಕುಮಾರ್ ಅವರನ್ನು ಮಾತ್ರ ಬಿಡುಗಡೆ ಮಾಡುವ ಬಗ್ಗೆ ಚಿಂತಿಸುತ್ತಿದ್ದಾನೆ.
ಈವರೆಗೆ ಗೋಪಾಲ್ಗೆ ಯಾವುದೇ ಸಂಕೇತ ದೊರೆತಿಲ್ಲ. ಮಳೆಯ ಕಾರಣ, ವೀರಪ್ಪನ್ ಅಡಗುತಾಣ ಬದಲಾಯಿಸುತ್ತಿರುವುದೇ ಈ ವಿಳಂಬಕ್ಕೆ ಕಾರಣ ಎನ್ನಲಾಗಿದೆ. ಸೋಮವಾರ ಗೋಪಾಲ್ಗೆ ವೀರಪ್ಪನ್ ತನ್ನ ಚಾರರ ಮೂಲಕ ಸಂದೇಶ ಕಳುಹಿಸಲಿದ್ದು, ರಾಜ್ಕುಮಾರ್ ಅವರ ಆರೋಗ್ಯ ಸುಧಾರಿಸದಿದ್ದರೆ, ಅವರನ್ನು ಬಿಡುಗಡೆ ಮಾಡಿ ಗೋಪಾಲ್ ಜೊತೆಗೆ ಕಳಿಸಿಕೊಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯಪಾಲರ ಭೇಟಿ : ಈ ಮಧ್ಯೆ ಕರ್ನಾಟಕದ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅವರು ಮುಖ್ಯಮಂತ್ರಿ ಕೃಷ್ಣ ಅವರೊಂದಿಗೆ ರಾಜ್ ಬಿಡುಗಡೆ ವಿಳಂಬದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದು ಕೇವಲ ಸೌಜನ್ಯದ ಭೇಟಿಯಾಗಿತ್ತು ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಮೂಲಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications