ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಪಘಾತ : ನಿಶ್ಚಿತಾರ್ಥ ತಂಡದ ನಾಲ್ವರ ನಿಧನ
ಗುಲ್ಬರ್ಗಾ : ಮದುವೆ ನಿಶ್ಚಿತಾರ್ಥಕ್ಕಾಗಿ ಹೊರಟಿದ್ದ ಜನರು ಪ್ರಯಾಣಿಸುತ್ತಿದ್ದ ಡಿಸಿಎಂ ಟೊಯೋಟಾ ವಾಹನ ಉರುಳಿಬಿದ್ದ ಪರಿಣಾಮವಾಗಿ ನಾಲ್ಕು ಮಂದಿ ಮೃತಪಟ್ಟು, 40 ಮಂದಿ ಗಾಯಗೊಂಡ ಘಟನೆ ಚಿತ್ತಾಪುರ ತಾಲೂಕಿನ ಟೇಂಗಳಿ ಸರ್ಕಲ್ ಬಳಿ ಸಂಭವಿಸಿದೆ.
ಗಾಯಗೊಂಡಿರುವವರ ಪೈಕಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಮಗು ಸೇರಿದೆ. ವಾಹನದ ಚಾಲಕ ತಲೆ ತಪ್ಪಿಸಿಕೊಂಡಿದ್ದು, ಶಹಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಿರಾಜ್ ಎನ್ನುವವರ ನಿಶ್ಚಿತಾರ್ಥಕ್ಕಾಗಿ ಡಿಸಿಎಂ ಟೊಯೋಟಾ ವಾಹನದಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
Comments
Story first published: Tuesday, September 26, 2000, 5:30 [IST]