‘ಗೋಡಂಬಿ ಉತ್ಪಾದಕರ ಹಿತಾಸಕ್ತಿಗೆ ಮಾರುಕಟ್ಟೆ ಕಾಯ್ದೆಯಲ್ಲಿ ತಿದ್ದುಪಡಿ’
ಮಂಗಳೂರು : ಗೋಡಂಬಿ ಉತ್ಪಾದಕರ ತೊಂದರೆಗಳ ನೀಗಿಸಿ, ಸೂಕ್ತ ಸವಲತ್ತು ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ಕೊಟ್ಟಿದೆ.
ಮಾರುಕಟ್ಟೆ ಶುಲ್ಕದಿಂದ ತಮಗೆ ತೊಂದರೆಯಾಗುತ್ತಿದೆ ಎಂದು ಗೋಡಂಬಿ ಉತ್ಪಾದಕರು ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಕೃಷ್ಣ ಸೋಮವಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಎಂಆರ್ಟಿಎಲ್ನಂತಹ ದೊಡ್ಡ ಸಂಸ್ಥೆಗಳಿಂದ ಉದ್ಯೋಗಾವಕಾಶಗಳ ಸೃಷ್ಟಿ ಆಗುತ್ತಿಲ್ಲ. ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ಉದ್ದೇಶಿಸಿದ್ದು, ಸಾವಿರಾರು ದುಡಿಯುವ ಕೈಗಳಿಗೆ ಉದ್ಯೋಗ ನೀಡಿರುವ ಗೋಡಂಬಿ ಕೈಗಾರಿಕೆ ರಫ್ತು ಆಧಾರಿತ ಉದ್ಯಮದ ಹಿತಾಸಕ್ತಿಯನ್ನು ರಾಜ್ಯ ಸರ್ಕಾರ ರಕ್ಷಿಸುತ್ತದೆ ಎಂದು ಭರವಸೆ ಕೊಟ್ಟರು.
ಟಾಸ್ಕ್ಫೋರ್ಸ್ : 10 ತಿಂಗಳ ಹಿಂದೆ ಬೆಂಗಳೂರಿನಲ್ಲಿ ರಚಿಸಿದ ಬೆಂಗಳೂರು ಅಭಿವೃದ್ಧಿ ಟಾಸ್ಕ್ಫೋರ್ಸ್ ಮಾದರಿಯಲ್ಲಿ ಮಂಗಳೂರಲ್ಲೂ ಟಾಸ್ಕ್ಫೋರ್ಸ್ ರಚನೆ ಮಾಡಿರುವುದನ್ನು ಮುಖ್ಯಮಂತ್ರಿ ಪ್ರಕಟಿಸಿದರು. ಉದ್ಯಮಿ ವಿನಯ್ ಹೆಗ್ಡೆ ಅಧ್ಯಕ್ಷತೆಯ ಟಾಸ್ಕ್ಫೋರ್ಸ್ನಲ್ಲಿ ವಿವಿಧ ಕ್ಷೇತ್ರಗಳ ಪರಿಣತರಿದ್ದು, ಅಭಿವೃದ್ಧಿ ಕಾರ್ಯಗಳ ಮೇಲೆ ನಿಗಾ ಇಡಲಿದ್ದಾರೆ. ಸೂಕ್ತ ಸಲಹೆಗಳನ್ನೂ ನೀಡಲಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಸಮರ್ಪಕ ಹಾಗೂ ತ್ವರಿತವಾಗಿ ಆಗಲಿವೆ ಎಂದು ಕೃಷ್ಣ ಹೇಳಿದರು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications