ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೆಂಗಳೂರಿಗೆ ಬೇಕು ಮತ್ತೊಂದು ಸುಸಜ್ಜಿತ ರೈಲು ನಿಲ್ದಾಣ
ಬೆಂಗಳೂರು : ಬೆಂಗಳೂರು ನಗರ ಬೆಳೆದಿದೆ ನೋಡ... ಹಾಡು ದಶಕಗಳ ಹಿಂದೆಯೇ ಬೆಂಗಳೂರಿನ ಬೆಳವಣಿಗೆ ವಿವರಿಸಿತ್ತು. ಈಗ ಬೆಂಗಳೂರು ಕಲ್ಪನೆಗೂ ಮೀರಿ ಬೆಳೆದಿದೆ. ಬೆಂಗಳೂರಿನ ಜನದಟ್ಟಣೆ ಹೆಚ್ಚಿದೆ. ಬೆಂಗಳೂರಿಗೆ ಉದ್ಯೋಗ ಅರಸಿ, ವಿದ್ಯಾಭ್ಯಾಸಕ್ಕಾಗಿ, ವ್ಯಾಪಾರಾರ್ಥವಾಗಿ ಬರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ಬೆಂಗಳೂರು ಕೇಂದ್ರ ರೈಲು ನಿಲ್ದಾಣವಂತೂ ಸದಾ ಜನರಿಂದ ತುಂಬಿ ತುಳುಕುತ್ತಿರುತ್ತದೆ. ಬೆಂಗಳೂರು ಕೇಂದ್ರ ರೈಲು ನಿಲ್ದಾಣದ ಜನದಟ್ಟಣೆ ಕಡಿಮೆ ಮಾಡಲು ಬೆಂಗಳೂರಿಗೆ ಮತ್ತೊಂದು ಸುಸಜ್ಜಿತ ರೈಲು ನಿಲ್ದಾಣದ ಅಗತ್ಯ ಇದೆ. ಈ ವಿಷಯವನ್ನು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಓ. ರಾಜಗೋಪಾಲ್ ಅವರ ಗಮನಕ್ಕೂ ತರಲಾಗಿದೆ.
ನಗರದಲ್ಲಿ ಜರುಗಿದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ರಾಜ್ಯದ ವಿವಿಧ ರೈಲ್ವೆ ಯೋಜನಗೆಳ ಹಾಗೂ ಕಾಮಗಾರಿಗಳ ಬಗ್ಗೆ ಚರ್ಚೆಯಾಗಿದೆ. ಇದೆಲ್ಲದರ ಬಗ್ಗೆಯೂ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದು ರೈಲ್ವೆ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
Story first published: Tuesday, September 26, 2000, 5:30 [IST]