ಬಸ್ಸಿಗೆ ಕಲ್ಲು ತೂರಿದ ಪ್ರಕರಣ : ಬೆಂಗಳೂರಲ್ಲಿ ಒಬ್ಬನ ಬಂಧನ
ಬೆಂಗಳೂರು : ಬೆಂಗಳೂರಿನಲ್ಲಿ ಬೆಳಗ್ಗೆ ವಾಹನಗಳ ಓಡಾಟ ಇತ್ತು. ಬಿಸಿಲೇರುತ್ತಿದ್ದಂತೆ, ಬಂದ್ಗೆ ಕಾವೂ ಏರಿತು. ರಸ್ತೆಗಳೆಲ್ಲ ಬಿಕೋ ಎನ್ನುತ್ತಿದ್ದವು. ವಿರಳವಾಗಿ ಓಡಾಡುತ್ತಿದ್ದ ಬಸ್ಗೆ ಕಲ್ಲು ತೂರಿದ ಘಟನೆಯೂ ನಡೆಯಿತು. ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ನಗರ ಪೊಲೀಸ್ ಕಮೀಷನರ್ ಟಿ. ಮಡಿಯಾಳ್ ತಿಳಿಸಿದ್ದಾರೆ.
ರಾಜ್ಯದ್ಯಂತ ಬಂದ್ ಶಾಂತಿಯುತವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆದ ವರದಿ ಬಂದಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ಸಿ. ದಿನಕರ್ ತಿಳಿಸಿದ್ದಾರೆ. ರಾಜ್ಕುಮಾರ್ ಶೀಘ್ರ ಬಿಡುಗಡೆಗೆ ಆಗ್ರಹಿಸಿ ಮತ್ತು ಕೇಂದ್ರದ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ, ಕರೆ ನೀಡಲಾಗಿದ್ದ ಬಂದ್ ಬಹುತೇಕ ಶಾಂತಿಯುತವಾಗಿತ್ತು.
ಆಡಳಿತ ಯಂತ್ರ ಹಾಗೂ ಸಾರಿಗೆ ವ್ಯವಸ್ಥೆ ತಡೆಯಿಲ್ಲದೆ ನಡೆಯುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗಿನಿಂದಲೇ ಸಾರಿಗೆ ವಾಹನಗಳು ವಿರಳವಾಗಿ ನಗರದಲ್ಲಿ ಸಂಚರಿಸಿದವು. ರಾಜ್ಯ ಸರಕಾರಿ ಕಚೇರಿಗಳಲ್ಲಿ ಎಂದಿನಂತೆ ಹಾಜರಾತಿ ಬೆರಳೆಣಿಕೆಯಷ್ಟಿತ್ತು. ವಿಧಾನಸೌಧ - ಹೈಕೋರ್ಟ್ ಆವರಣ ಹಾಳು ಸುರಿಯುತ್ತಿತ್ತು. ರಸ್ತೆಗಳು ನಿರ್ಜನವಾಗಿದ್ದವು. ಆಫೀಸಿಗಳಿಗೆ ಹೋಗಲೇ ಬೇಕಾದವರು ನಟರಾಜ ಸರ್ವಿಸ್ನಲ್ಲಿ ಹೋದರು. ಉಳಿದವರು ಟಿವಿ ಚಾನಲ್ಗಳಿಗೆ, ಕುಟುಂಬದವರೊಂದಿಗೆ ಸಹಭೋಜನಕ್ಕೆ ಶರಣಾದರು.
ಶಾಲೆಗಳಿಗೆ ರಜೆ : ಮಂಡ್ಯ, ಮೈಸೂರು, ಹಾಸನ, ಕೋಲಾರದಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಶಂಕಿತರನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ರಾತ್ರಿಯವರೆಗೆ ಸುಮಾರು 500 ಜನರನ್ನು ಬಂಧಿಸಲಾಗಿತ್ತು. 10 ಸಾವಿರ ಸಶಸ್ತ್ರ ಪೊಲೀಸರ ಜತೆಗೆ ಹೋಂಗಾರ್ಡ್ಸ್ ಸಿಬ್ಬಂದಿ ಸಹ ಶಾಂತಿ ಪಾಲನೆಯಲ್ಲಿ ನೆರವಾಗಿದ್ದರು. ರೈಲು ಸಂಚಾರ ಮಾಮೂಲಿನಂತಿತ್ತು. ಚಿತ್ರಮಂದಿರಗಳು ಪ್ರದರ್ಶನ ರದ್ದು ಮಾಡಿವೆ.
ವಾಟಾಳ್ ಬಂಧನ : ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಹಾಗೂ ಅವರ ಹತ್ತು ಮಂದಿ ಬೆಂಬಲಿಗರನ್ನು ಯಥಾಪ್ರಕಾರ ಬಂಧಿಸಲಾಯಿತು. ಬಂಧನಕ್ಕೆ ಮೊದಲು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ರಾಜ್ ಅಪಹರಣ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರವನ್ನು ವಜಾ ಮಾಡುವಂತೆ ಒತ್ತಾಯಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications