ಪಾರ್ವತಮ್ಮ ರೇಡಿಯೋದಲ್ಲಿ ಅತ್ತಿದ್ದನ್ನು ಕೇಳಿ ತಡೆಯಲಾರದೆ ಓಡಿ ಬಂದೆ
ಬೆಂಗಳೂರು : ‘ಪಾರ್ವತಕ್ಕ ರೇಡಿಯೋದಲ್ಲಿ ಅತ್ತಿದ್ದನ್ನು ಕೇಳಿ ತಡೆಯಲಾರದೆ ಓಡಿ ಬಂದೆ. ನಾನು ಕಾಡಿನಿಂದ ಓಡಿ ಬಂದಿರುವುದರಿಂದ ರಾಜ್ಕುಮಾರ್ ಅವರಿಗೆ ಏನೂ ತೊಂದರೆ ಆಗುವುದಿಲ್ಲ. ರಾಜ್ಕುಮಾರ್ ಅವರನ್ನು ವೀರಪ್ಪನ್ ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದಾನೆ. ಮಾರನ್ ಎಂಬ ವ್ಯಕ್ತಿಯನ್ನು ನಾನು ನೋಡಿಯೇ ಇಲ್ಲ ’ ಎಂದು ವೀರಪ್ಪನ್ ಅಡಗುದಾಣದಿಂದ ತಪ್ಪಿಸಿಕೊಂಡು ಬಂದಿರುವ ನಾಗಪ್ಪ ಶುಕ್ರವಾರ ಬೆಳಿಗ್ಗೆ ಪತ್ರಕರ್ತರಿಗೆ ಹೇಳಿದ್ದಾರೆ.
ಗುರುವಾರ ರಾತ್ರಿ ನಾಗಪ್ಪ ಅವರನ್ನು ಚಾಮರಾಜ ನಗರದ ಪೊಲೀಸರ ವಶದಲ್ಲಿಡಲಾಗಿತ್ತು. ನಾಗಪ್ಪರೊಂದಿಗೆ ಮಾತನಾಡಬೇಕೆಂದು ಪತ್ರಕರ್ತರು ಶುಕ್ರವಾರದಂದು ಬೆಳಿಗ್ಗೆ ಠಾಣೆಯ ಹೊರಗೆ ಜಮಾಯಿಸಿದ್ದರು. ನೆರೆದಿದ್ದ ಪತ್ರಕರ್ತರ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ನಂತರ ಅವರ ಒತ್ತಾಯದ ಮೇರೆಗೆ , ನಾಗಪ್ಪ ಅವರಿಗೆ ಪತ್ರಕರ್ತರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಲಾಯಿತು. ರಾಜ್ಕುಮಾರ್ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ ನಾಗಪ್ಪ ಅವರು ಕಾಡಿನಲ್ಲಿ ಸುಮಾರು 150 ಕಿ.ಮೀ. ಗೂ ಹೆಚ್ಚು ದೂರ ಅಲೆದಾಡಿದ್ದೇನೆ ಎಂದು ಹೇಳಿದ್ದಾರೆ.
ಇಂದು ಮಧ್ಯಾಹ್ನ ನಾಗಪ್ಪ, ಮುಖ್ಯಮಂತ್ರಿ ಭೇಟಿ : ಶುಕ್ರವಾರದಂದು ಚಾಮರಾಜ ನಗರದ ಪೊಲೀಸ್ ಅಧೀಕ್ಷಕ ಅಣ್ಣೆ ಗೌಡರ ಜೊತೆಗೆ ನಾಗಪ್ಪ ಅವರು ಬೆಂಗಳೂರು ತಲುಪಲಿದ್ದಾರೆ. ಬೆಂಗಳೂರಿನಲ್ಲಿ ನಾಗಪ್ಪ , ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಲಿದ್ದಾರೆ. ನಾಗಪ್ಪರೊಂದಿಗೆ ಮಾತನಾಡಿದ ನಂತರ ಎಸ್. ಎಂ. ಕೃಷ್ಣ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಲಿದ್ದು, ಮುಂದಿನ ಕಾರ್ಯವಿಧಾನಗಳ ಕುರಿತು ವಿವರಿಸಲಿರುವುದಾಗಿ ವರದಿಯಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications