ಸುರತ್ಕಲ್ ಬಳಿ ರೈಲು ಅಪಘಾತ : ಕೊಂಕಣ ರೈಲು ಸಂಚಾರ ಸ್ಥಗಿತ
ಮಂಗಳೂರು : ದೆಹಲಿಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ಮಂಗಳಾ ಲಕ್ಷದ್ವೀಪ ಎಕ್ಸ್ ಪ್ರೆಸ್ ರೈಲು ಸೋಮವಾರ ನಸುಕಿನ ವೇಳೆ ಸುಮಾರು 2.30ಕ್ಕೆ ಸುರತ್ಕಲ್ ಸಮೀಪ ಅಪಘಾತಕ್ಕೀಡಾಗಿದ್ದು, ನಾಲ್ಕು ಮಂದಿ ಪ್ರಯಾಣಿಕರು ಗಾಯಗೊಂಡಿ-ದ್ದಾ--ರೆ.
ರೈಲಿನಲ್ಲಿ -ದ್ದ ಎಲ್ಲಾ 600 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರತ್ಕಲ್ಗೆ 2 ಕಿ. ಮೀ. ದೂರದ ಕುಳಾಯಿ ಬಳಿ ಎರಡು ಗುಡ್ಡಗಳ ನಡುವೆ, ಹಳಿಗಳ ಮೇಲೆ ಉರುಳಿಬಿದ್ದ ಬಂಡೆಗೆ ಡಿಕ್ಕಿ ಹೊಡೆದ ಪರಿ-ಣಾ-ಮ-ವಾ-ಗಿ ರೈಲು ಇಂಜಿನ್ ಸೇರಿ ಐದು ಬೋಗಿಗಳು ಹಳಿ ತಪ್ಪಿವೆ. ಈ ಅವಘಡದಲ್ಲಿ ಅಂದಾಜು 4 ಲಕ್ಷ ರೂಪಾಯಿ ಹಾನಿಯುಂಟಾಗಿದೆ. ರೊನಾಲ್ಡ್, ವಿಜೇತಾ, ವೈ. ಎನ್. ಜಾಯ್, ಸಿ. ಕೆ. ಬಾಬು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೈಲು ಸಂಚಾರ ಸ್ಥಗಿತ : ರೈಲು ಹಳಿ ತಪ್ಪಿರುವುದರಿಂದ ಕೊಂಕಣ ರೈಲು ಮಾರ್ಗದ ಎಲ್ಲ ರೈಲುಗಳ ಓಡಾಟ ರದ್ದಾಗಿದೆ. ಹಳಿಯನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ರೈಲಿನಲ್ಲಿದ್ದ ಇತರ ಪ್ರಯಾಣಿಕರನ್ನು ಬಸ್ಸುಗ-ಳ ಮೂಲಕ ಅವರವರ ಸ್ಥಳಗಳಿಗೆ ಕಳಿ-ಸಲಾಗಿದೆ.
ಕೊಂಕಣ ರೈಲ್ವೇ ರೀಜನಲ್ ಮ್ಯಾನೇಜರ್ ಎ.ಸಿ. ಬಾಲಕೃಷ್ಣನ್, ಮಂಗಳೂರು ಕೆ.ಎಸ್.ಆರ್. ಟಿ.ಸಿ ವಿಭಾಗೀಯ ನಿಯಂತ್ರಕ ಡಿ. ವೆಂಕಟೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಸ್ ದರ ಏರಿಕೆ : ಡೀಸೆಲ್ ದರ ಏರಿರುವ ಬೆನ್ನಲ್ಲಿಯೇ ಖಾಸಗಿ ಬಸ್ಸುಗಳ ಪ್ರಯಾಣದರವೂ ಏರಿಕೆಯಾಗಿದ್ದು ಅಕ್ಟೋಬರ್ 5 ರಿಂದ ಇದು ಜಾರಿಗೆ ಬ-ರ-ಲಿದೆ. ಬೆಂಗಳೂರಿನಲ್ಲಿ ನಡೆದ ಖಾಸಗಿ ಬಸ್ಸು ಮಾಲಕರ ಸಭೆಯಲ್ಲಿ ಬಸ್ಸು ಪ್ರಯಾಣ ದರವನ್ನು ಶೇಕಡಾ 20ರಷ್ಟು ಏರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಬಸ್ಸು ಮಾಲಕರ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮಂಗಳೂರಿನಲ್ಲಿ ಹೇಳಿದ್ದಾರೆ.
(ಮಂಗಳೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications