ಗೋಪಾಲ್ ಜತೆ ವೇಣುಗೋಪಾಲ್ರನ್ನೂ ಕಳುಹಿಸಲು ಸಲಹೆ
ಬೆಂಗಳೂರು : ಗೋಪಾಲ್ ಜತೆ ವಕೀಲ ವೇಣುಗೋಪಾಲ್ ಅವರನ್ನೂ ಸಂಧಾನಕ್ಕೆ ಕಳುಹಿಸುವಂತೆ ಹಾಗೂ ಟಾಡಾ ಮೊಕದ್ದಮೆ ವಾಪಸು ಪಡೆಯುವ ಅಧಿಕಾರ ರಾಜ್ಯ ಸರಕಾರಗಳಿಗೇ ನೀಡುವಂತೆ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯಿಸುವ ಸಲಹೆಗಳು ಮಂಗಳವಾರ ನಡೆದ ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಮೂಡಿಬಂದವು.
ರಾಜ್ಕುಮಾರ್ ಅವರನ್ನು ಸುರಕ್ಷಿತವಾಗಿ ಬಿಡಿಸಿಕೊಳ್ಳಲು ಸಂಧಾನದ ಮಾರ್ಗವನ್ನೇ ಅನುಸರಿಸಬೇಕು. ಆದರೆ, ಗೋಪಾಲ್ ಜತೆ ಕರ್ನಾಟಕದ ಪ್ರತಿನಿಧಿಯೂ ಇರಬೇಕು. ಆ ಪ್ರತಿನಿಧಿ ವೇಣುಗೋಪಾಲ್ ಆಗಲಿ ಎಂಬ ಸಲಹೆ ಪ್ರತಿಪಕ್ಷ ನಾಯಕರಿಂದ ಬಂತು. ಸಂಧಾನದ ಹೊರತಾಗಿ ಪರ್ಯಾಯ ಮಾರ್ಗದ ಸಲಹೆ - ಸೂಚನೆಗಳೂ ಸಭೆಯಲ್ಲಿ ಮೊಳಗಿದವು.
ರಾಜ್ ಅಪಹರಣವಾದ ದಿನದಿಂದಲೂ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸರ್ವ ಪಕ್ಷ ಸಭೆಗಳನ್ನು ಕರೆಯುತ್ತಲೇ ಇದ್ದಾರೆ. ವಿಪಕ್ಷಗಳ ನಾಯಕರು ತಮ್ಮ ಅಭಿಪ್ರಾಯ, ಸಲಹೆ ನೀಡುತ್ತಲೇ ಇದ್ದಾರೆ. ಮಂಗಳವಾರದ ಸಭೆಯಲ್ಲೂ ಸಲಹೆಗಳು ಮೂಡಿವೆ. ಎಷ್ಟರ ಮಟ್ಟಿಗೆ ಕಾರ್ಯಗತವಾಗುತ್ತವೆ ಎಂಬುದನ್ನು ರಜತ ಪರದೆಯ ಮೇಲೇ ನೋಡಬೇಕು.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕರುಗಳಾದ ಜಗದೀಶ ಶೆಟ್ಟರ್, ಬಸವರಾಜ ಸೇಡಂ, ಎಂ.ಪಿ. ಪ್ರಕಾಶ್, ಎಂ.ಸಿ. ನಾಣಯ್ಯ, ಸಿದ್ಧರಾಮಯ್ಯ, ಕೆ.ಎಚ್. ಶ್ರೀನಿವಾಸ್, ಶಂಕರಮೂರ್ತಿ, ಚೆನ್ನಿಗಪ್ಪ, ಬೈರೇಗೌಡ, ಪಿ.ಜಿ.ಆರ್. ಸಿಂಧ್ಯಾ ಅವರು ಈ ಸಭೆಯಲ್ಲಿ ರಾಜ್ ಬಿಡುಗಡೆ ಪ್ರಕ್ರಿಯೆಯ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು.
ಅ.11ರ ನಂತರ ಸಂಧಾನ ಯಾತ್ರೆ : ಟಾಡಾ ಬಂದಿಗಳ ಬಿಡುಗಡೆ ಸಂಬಂಧ ಸರ್ವೋನ್ನತ ನ್ಯಾಯಾಲಯ ಅಕ್ಟೋಬರ್ 11ರಂದು ವಿಚಾರಣೆ ನಡೆಸಲಿರುವ ಹಿನ್ನೆಲೆಯಲ್ಲಿ ಆನಂತರವೇ ಮತ್ತೊಂದು ಸಂಧಾನ ಯಾತ್ರೆಯ ಬಗ್ಗೆ ಚಿಂತಿಸಬೇಕು. ತಮಿಳುನಾಡು ಸರಕಾರದ ಮೇಲೆ ರಾಜ್ ಬಿಡುಗಡೆ ಪ್ರಕ್ರಿಯೆ ಚುರುಕುಗೊಳಿಸಲು ಒತ್ತಡ ಹೇರಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸಂಸದರೊಂದಿಗೂ ಚರ್ಚೆ : ಈಗ ರಾಜ್ಯವನ್ನು ಪ್ರತಿನಿಧಿಸುವ ಸಂಸತ್ ಸದಸ್ಯರೊಂದಿಗೆ ಕೂಡ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸುತ್ತಿದ್ದು, ಈ ಸಭೆಯ ನಂತರ ರಾಜ್ಕುಮಾರ್ ಬಿಡುಗಡೆಗೆ ಯಾವ ಕ್ರಮ ಕೈಗೊಳ್ಳಬೇಕು ಎಂಬ ನಿರ್ಧಾರ ಹೊರಬೀಳಲಿದೆ.
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications