ಅಲ್ಪಸಂಖ್ಯಾಕರ ಸಮಿತಿಯ ತಮ್ಮ ಪ್ರತಿನಿಧಿಗೆರಾಜ್ಯ ಕ್ರಿಶ್ಚಿಯನ್ನರ ವಿರೋಧ
ಬೆಂಗಳೂರು : ದೇಶಾದ್ಯಂತ ಕ್ರಿಶ್ಚಿಯನ್ನರು ತಮ್ಮ ಸಮುದಾಯದ ಮೇಲಿನ ದೌರ್ಜನ್ಯದ ಬಗ್ಗೆ ಎತ್ತಿರುವ ಸೊಲ್ಲು ಇನ್ನೂ ತಣ್ಣಗಾಗೇ ಇಲ್ಲ. ಈ ನಡುವೆ ಅಲ್ಪ ಸಂಖ್ಯಾಕರ ರಾಷ್ಟ್ರೀಯ ಸಮಿತಿ (ಎನ್ಸಿಎಂ) ಯಲ್ಲಿರುವ ಏಕೈಕ ಕ್ರಿಶ್ಚಿಯನ್ನರ ಪ್ರತಿನಿಧಿ ಆಯ್ಕೆ ಬಗ್ಗೆ ಕರ್ನಾಟಕದ ಕ್ರಿಶ್ಚಿಯನ್ನರು ಆಕ್ಷೇಪಣೆ ಎತ್ತಿದ್ದಾರೆ.
ಜೋಸೆಫ್ಗೇ ಪದ ಯಾಕೆ? : ಜಾನ್ ಜೋಸೆಫ್ ಎಂಬ ವ್ಯಕ್ತಿ ಸಮಿತಿಯಲ್ಲಿರುವ ಭಾರತದ ಏಕೈಕ ಕ್ರಿಶ್ಚಿಯನ್ ಪ್ರತಿನಿಧಿ. ಆದರೆ ಈತನನ್ನು ತಮ್ಮ ಪ್ರತಿನಿಧಿ ಎಂದು ಒಪ್ಪಿಕೊಳ್ಳಲು ರಾಜ್ಯದ ಕ್ರಿಶ್ಚಿಯನ್ ಸಮುದಾಯ ಸಿದ್ಧವಿಲ್ಲ. ‘ಸರ್ಕಾರ ಯಾವ ಮಾನದಂಡದ ಆಧಾರದ ಮೇಲೆ ಈ ವ್ಯಕ್ತಿಯನ್ನು ಎನ್ಸಿಎಂಗೆ ಆಯ್ದಿದೆ ಎಂಬುದೇ ತಿಳಿಯುತ್ತಿಲ್ಲ. ಸಮುದಾಯದಲ್ಲಿ ಎಂತೆಂಥ ಅತಿರಥ ಮಹಾರಥರಿದ್ದಾರೆ, ಜಗಜ್ಜಾಣರಿದ್ದಾರೆ, ಸಮಸ್ಯೆಗೆ ತುಡಿಯುವ ಮನಸ್ಸಿನವರಿದ್ದಾರೆ. ಅಂಥವರನ್ನೆಲ್ಲಾ ಬಿಟ್ಟು ಜಾನ್ ಜೋಸೆಫ್ ಅವರನ್ನೇ ಕುರ್ಚಿ ಮೇಲೆ ಕೂರಿಸಿರುವುದಾದರೂ ಯಾಕೆ’ ಎನ್ನುತ್ತಾರೆ ಅಖಿಲ ಭಾರತ ಕ್ರಿಶ್ಚಿಯನ್ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯೆ ಫಿಲೋಮಿನಾ ಪೆರೆಸ್.
ಕರ್ನಾಟಕ ಕ್ರಿಶ್ಚಿಯನ್ ಸಂಘ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಪೆರೆಸ್, ‘ಜಾನ್ ಜೋಸೆಫ್ ಅವರನ್ನು ಪದದಲ್ಲಿ ಮುಂದುವರೆಸಿದಲ್ಲಿ ಅದು ಇಡೀ ಕ್ರಿಶ್ಚಿಯನ್ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಶೀಘ್ರವೇ ಅವರನ್ನು ಪದಚ್ಯುತಿಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಸಂವಿಧಾನಾತ್ಮಕ ಅಂಗವಾದ ಎನ್ಸಿಎಂ 1992ರಿಂದ ಅಸ್ತಿತ್ವದಲ್ಲಿದೆ. ಪ್ರಸ್ತುತ ನ್ಯಾಯಮೂರ್ತಿ ಮೊಹಮ್ಮದ್ ಶಾಮೀಮ್ ಇದರ ಅಧ್ಯಕ್ಷರು. ಕಳೆದ ಜನವರಿಯಲ್ಲಿ ಎನ್ಸಿಎಂ ಪುನರ್ ರಚಿತವಾಯಿತು. 1993-96ರ ಅವಧಿಯಲ್ಲೂ ಜಾನ್ ಜೋಸೆಫ್ ಸಮಿತಿಯ ಸದಸ್ಯರಾಗಿದ್ದರು. ಆಶ್ಚರ್ಯವೆಂದರೆ, ಆಗ ಕ್ರಿಶ್ಚಿಯನ್ ಸಮುದಾಯ ಅವರ ವಿರುದ್ಧ ಈ ರೀತಿ ಸೊಲ್ಲೆತ್ತಿರಲಿಲ್ಲ. ಆದರೆ ಇತ್ತೀಚೆಗೆ ಕ್ರಿಸ್ತ ಜಯಂತಿ ದಿನದಂದು ನಡೆದ ಸಾರ್ವಜನಿಕ ಸಭೆಯಲ್ಲಿ ಜೋಸೆಫ್ ವಿರುದ್ಧ ಕೂಗುಗಳೆದ್ದವು. ಅವರ ಪ್ರಾತಿನಿಧ್ಯದ ಬಗೆಗೂ ಚರ್ಚೆ ನಡೆದವು.
‘ಇಂಥವ ನಮ್ಮ (ಕ್ರಿಶ್ಚಿಯನ್ನರ ) ಪ್ರತಿನಿಧಿಯೇ?’
‘ದೇಶದಲ್ಲಿ ಕ್ರಿಶ್ಚಿಯನ್ನರ ಮೇಲೆ ದೌರ್ಜನ್ಯಗಳಾದಾಗ ತನ್ನ ಸಮುದಾಯದವರ ಅಳಲಿಗೆ ಸ್ಪಂದಿಸದೆ, ಸರ್ಕಾರದ ತಲೆ ಸವರುವ ಪ್ರತಿನಿಧಿಯಂತೆ ವರ್ತಿಸಿದವರು ಜಾನ್ ಜೋಸೆಫ್. ಹಿಂದೊಮ್ಮೆ ಕ್ರಿಶ್ಚಿಯನ್ ಪಾದ್ರಿಯಾಬ್ಬರ ಮೇಲೆ ನಡೆದ ದಾಳಿಯನ್ನು ಅಪಘಾತ ಎಂದು ಸಾಬೀತು ಮಾಡಲು ಹೊರಟಿದ್ದವರು ಅವರು. ಅಂಥ ವ್ಯಕ್ತಿಯನ್ನು ಸಮಿತಿಯಲ್ಲಿನ ನಮ್ಮವ ಎಂದು ಹೇಗೆ ಕರೆಯೋಣ?’ ಎನ್ನುತ್ತಾರೆ ಅಖಿಲ ಭಾರತ ಕ್ರಿಶ್ಚಿಯನ್ ಸಮಿತಿಯ ವಿಭಾಗೀಯ ಸಂಚಾಲಕ ಆಲಿವರ್ ಡಿಸೋಜ.
ಕರ್ನಾಟಕ ಕ್ರಿಶ್ಚಿಯನ್ ದಲಿತರ ಒಕ್ಕೂಟವೂ ಜಾನ್ ಪ್ರಾತಿನಿಧ್ಯವನ್ನು ವಿರೋಧಿಸಿದೆ. ‘ಜಾನ್ ಜೋಸೆಫ್ ಅವರಿಂದ ಸಮುದಾಯ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸಮುದಾಯದ ಬಗೆಗೆ ಚಿಂತಿಸುವ ಅನೇಕರಿರುವಾಗ ಅವರನ್ನು ಈ ಕುರ್ಚಿಯ ಮೇಲೆ ಹೇಗೆ ಕೂರಿಸಲಾಯಿತೆಂಬುದೇ ತಿಳಿಯುತ್ತಿಲ್ಲ’ ಎನ್ನುತ್ತಾರೆ ಒಕ್ಕೂಟದ ಅಧ್ಯಕ್ಷ ವೈ. ಮರಿಸ್ವಾಮಿ.
ಪ್ರತಿಭಟನೆಗೆ ತುದಿಗಾಲಲ್ಲಿ : ಜಾನ್ ಜೋಸೆಫ್ ಭಾಗವಹಿಸುವ ಸಮಾರಂಭಗಳಲ್ಲಿ ಅವರನ್ನು ವಿರೋಧಿಸಲು ರಾಜ್ಯದ ಕ್ರಿಶ್ಚಿಯನ್ ಸಂಘ- ಸಂಸ್ಥೆಗಳು ತುದಿಗಾಲಲ್ಲಿ ನಿಂತಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜನ ಅವರ ವಿರುದ್ಧ ಸೊಲ್ಲೆತ್ತಿದರೂ ರಾಜ್ ಅಪಹರಣದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರಿಂದ ಪ್ರತಿಭಟನೆ ಯಶಸ್ವಿಯಾಗಲಿಲ್ಲ.
‘ಯಾವುದೇ ಕ್ರಿಶ್ಚಿಯನ್ ಸಂಘಟನೆಗಳ ಕಳಕಳಿಗೆ ಸ್ಪಂದಿಸದ ವ್ಯಕ್ತಿ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪ್ರತಿನಿಧಿಯಾಗಲು ಅರ್ಹನಲ್ಲ. ಆತನನ್ನು ಕ್ರಿಶ್ಚಿಯನ್ ಸಮುದಾಯದ ವಕ್ತಾರ ಎಂದು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂಬುದು ಡಿಸೋಜ ಪಟ್ಟು.
(ಐಎಎನ್ಎಸ್)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications