ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಳೆ ಹಾನಿ : 42.5 ಕೋಟಿ ರು. ಪರಿಹಾರ ಮೊತ್ತ ಬಿಡುಗಡೆ
ಬೆಂಗಳೂರು : ರಾಜ್ಯದ 10 ಜಿಲ್ಲೆಗಳಲ್ಲಿ ಮುಂಗಾರು ತೀವ್ರಗೊಂಡಿದೆ. ಬೆಂಗಳೂರು, ಶಿವಮೊಗ್ಗ, ಮಂಡ್ಯ, ಕೋಲಾರ, ರಾಯಚೂರು, ಗುಲ್ಬರ್ಗಾ, ದಾವಣಗೆರೆ, ಚಾಮರಾಜನಗರ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮಾಡಿದ ಹಾವಳಿ ಅಷ್ಟಿಷ್ಟಲ್ಲ.
ಈ ಜಿಲ್ಲೆಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಏಪ್ರಿಲ್ ಒಂದರಿಂದ ಈ ವರೆಗೆ 42.50 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ವಿಷಯವನ್ನು ರಾಜ್ಯ ಕಂದಾಯ ಸಚಿವ ಎಚ್.ಸಿ. ಶ್ರೀಕಂಠಯ್ಯ ತಿಳಿಸಿದ್ದಾರೆ.
ಇತ್ತೀಚೆಗೆ ಸುರಿದ ಮಳೆಯಿಂದ ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಪರಿಹಾರ ಕಾಮಗಾರಿಗಳಿಗಾಗಿ ಆಯಾ ಜಿಲ್ಲಾಧಿಕಾರಿಗಳು ಹೆಚ್ಚುವರಿ ಪರಿಹಾರದ ಹಣಕ್ಕೆ ಬೇಡಿಕೆ ಸಲ್ಲಿಸಿದ್ದು, ಈಗ ಮತ್ತಷ್ಟು ಹಣ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
Comments
Story first published: Tuesday, October 3, 2000, 5:30 [IST]