ದುಬಾರಿ ಚಿಕಿತ್ಸೆಗೆ ಕಡಿವಾಣ ಹಾಕಬೇಕು : ಡಾ.ಸುದರ್ಶನ್
ಬೆಂಗಳೂರು : ಹೃದಯ ಸಂಬಂಧೀ ರೋಗಗಳು ಹಾಗೂ ಕ್ಯಾನ್ಸರ್ ಸೇರಿದಂತೆ ಭಾರೀ ವೆಚ್ಚದ ರೋಗಗಳಿಗೆ ಕಡಿಮೆ ವೆಚ್ಚದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲು ವೈದ್ಯರು , ಸಂಘಸಂಸ್ಥೆಗಳು ಮತ್ತು ಸರಕಾರಗಳು ಯತ್ನಿಸಬೇಕೆಂದು ರಾಜ್ಯ ಆರೋಗ್ಯ ಕಾರ್ಯಪಡೆಯ ಅಧ್ಯಕ್ಷ ಡಾ. ಸುದರ್ಶನ್ ಕರೆ ನೀಡಿದ್ದಾರೆ.
‘ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ ಸಂಸ್ಥೆಯ ಏಳನೇ ವಾರ್ಷಿಕೋತ್ಸವದಲ್ಲಿ ಗುರುವಾರ ಭಾಗವಹಿಸಿ ಮಾತನಾಡಿದ ಅವರು ಆಧುನಿಕ ತಂತ್ರಜ್ಞಾನದ ವ್ಯಾಪಕ ಬಳಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವೈದ.್ಯಕೀಯ ಸೇವೆ ದುಬಾರಿಯಾಗುತ್ತಿದೆ ಹಾಗಾಗಿ ವೈದ್ಯಕೀಯ ಉಪಕರಣಗಳ ಆಮದು ಮತ್ತು ಹೊಸ ತಂತ್ರಜ್ಞಾನ ಬಳಕೆಗಾಗಿ ಸರಕಾರ ಧನ ಸಹಾಯ ನೀಡಿದರೆ ವೆಚ್ಚ ಕಡಿಮೆ ಮಾಡಲು ಸಾಧ್ಯ, ಈ ಸಂಬಂಧ ಕಾರ್ಯಪಡೆ ವರದಿಯಲ್ಲಿ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಡ ರೋಗಿಗಳಿಗೆ ವಿಮಾ ಕಂಪನಿಗಳು ಹೇಗೆ ನೆರವಾಗಬಹುದು ಎಂಬುದರ ಬಗೆಗೂ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಲಾಗಿದೆ. ಈ ವರದಿಯ ಬಗ್ಗೆ ಬರುವ ವಿಧಾನಸಭಾ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಹೃದಯಾಘಾತ ಇಷ್ಟ : ಕೆಲಸ ಮಾಡುತ್ತಲೇ ಹೃದಯಾಘಾತವಾಗಿ ಸಾಯುವುದನ್ನು ತಾವು ಇಚ್ಛಿಸುವುದಾಗಿ ರಾಜ್ಯಪಾಲರಾದ ರಮಾದೇವಿ ಹೇಳಿದ್ದಾರೆ.
ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯಕ್ಕೆ ಒತ್ತು ಕೊಡಲು ನುರಿತ ವೈದ್ಯರನ್ನು ತಯಾರು ಮಾಡಬೇಕು. ಅದಕ್ಕಾಗಿ ಉತ್ತಮ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಸರಕಾರ ಇನ್ನೂ ಹೆಚ್ಚು ಕೆಲಸ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications