ಶಸ್ತ್ರಚಿಕಿತ್ಸೆಗಾಗಿ ಇಂದು ಮುಂಬಯಿಗೆ ಪ್ರಧಾನಿ ವಾಜಪೇಯಿವಿಶೇಷ ಉಪಕರಣಗಳೊಂದಿಗೆ ಸಜ್ಜಾದ ಡಾ. ಚಿತ್ತರಂಜನ್ ತಂಡ
ಮುಂಬಯಿ : ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ನರಳುತ್ತಿರುವ ಪ್ರಧಾನಿ ವಾಜಪೇಯಿ ಅವರು, ಶಸ್ತ್ರ ಚಿಕಿತ್ಸೆಗಾಗಿ ಸೋಮವಾರ ಮುಂಬಯಿಗೆ ಆಗಮಿಸುತ್ತಿದ್ದಾರೆ.
ಮಂಡಿ ನೋವಿನ ನಡುವೆಯೂ ಯಶಸ್ವಿ ಅಮೆರಿಕಾ ಪ್ರವಾಸ ಪೂರೈಸಿದ ಪ್ರಧಾನಿಯವರು, ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ಈ ಸುಸಜ್ಜಿತ ಆಸ್ಪತ್ರೆ ಪ್ರಧಾನಿಯವರ ಶಸ್ತ್ರ ಚಿಕಿತ್ಸೆಗಾಗಿ ಸಜ್ಜಾಗಿದೆ. ಮುಂಬಯಿಗೆ ಆಗಮಿಸುವ ಅವರು ಕೆಲಕಾಲ ರಾಜಭವನದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ವಾಜಪೇಯಿ ಅವರಿಗೆ ಮಂಡಿಯ ಶಸ್ತ್ರ ಚಿಕಿತ್ಸೆ ಮಾಡುವ ಸಲುವಾಗಿಯೇ ಅಮೆರಿಕೆಯಿಂದ ಖ್ಯಾತ ಮೂಳೆ ತಜ್ಞ ಡಾ. ಚಿತ್ತರಂಜನ್ ರಣಾವತ್ ಸೋಮವಾರ ಮುಂಬಯಿಗೆ ಆಗಮಿಸುತ್ತಿದ್ದಾರೆ. ಪ್ರಧಾನ ಮಂತ್ರಿಗಳ ವಿಶೇಷ ರಕ್ಷಣಾ ಪಡೆ ಈಗಾಗಲೇ ಆಸ್ಪತ್ರೆಯನ್ನು ಸುತ್ತುವರಿದಿದೆ. ಡಾ. ಚಿತ್ತರಂಜನ್ ಅವರು, ಶಸ್ತ್ರ ಚಿಕಿತ್ಸೆಗಾಗಿ ತಮ್ಮದೇ ಆದ ವಿಶೇಷ ವೈದ್ಯರ ತಂಡ ಹಾಗೂ ವಿಶೇಷ ಹಾಗೂ ಅತ್ಯಾಧುನಿಕ ಉಪಕರಣಗಳನ್ನೂ ತರುತ್ತಿದ್ದಾರೆ.
ಮಂಗಳವಾರ ವಾಜಪೇಯಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆಸ್ಪತ್ರೆಯ ಆವರಣದೊಳಗೆ ಪತ್ರಿಕಾಗೋಷ್ಠಿ ನಡೆಸಲೂ ವ್ಯವಸ್ಥೆ ಮಾಡಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications