ಅ.15, ದೇವರಕಾಡು ಸಂರಕ್ಷಣೆಗೆ ಕೋಡಗಿನಲ್ಲಿ ವಿಚಾರಸಂಕಿರಣ
ಮಡಿಕೇರಿ : ಅರಣ್ಯ ನಾಶ ತಪ್ಪಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ಪರಿಕಲ್ಪನೆ ದೇವರಕಾಡು. ದೇವರಕಾಡು ಕೊಡಗು, ಮಲೆನಾಡು ಪ್ರದೇಶಗಳ ಕಾಡುಗಳಲ್ಲಿ ಅಸ್ಥಿತ್ವದಲ್ಲಿದೆ. ಕಾಡನ್ನೇ ದೇವರೆಂದು ಪೂಜಿಸುವ ಮೂಲಕ ಕಾಡು ನಾಶ ತಪ್ಪಿಸುವ ಉದ್ದೇಶದಿಂದ ಈ ಕಲ್ಪನೆ ಹುಟ್ಟಿಕೊಂಡು ನೂರು ವರ್ಷಗಳೇ ಕಳೆದಿವೆ.
ದೇವರಕಾಡು ಸಂರಕ್ಷಿಸುವ ಪರಿಣಾಮಕಾರಿ ನಿರ್ವಹಣೆ ಕುರಿತು ಭಾನುವಾರ ಮತ್ತು ಸೋಮವಾರ (ಅ.15 ಮತ್ತು 16) ಕೊಡಗು ಜಿಲ್ಲೆಯಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡು ಗಳ್ಳರು, ಮರಗಳ್ಳರು, ದೇವರಕಾಡನ್ನು ನಾಶಮಾಡುತ್ತಿದ್ದಾರೆ. ಉರುವಲಿಗಾಗಿ ಮರಕಡಿಯುವವರಿಂದ ಹಿಡಿದು, ಹಣದಾಸೆಗಾಗಿ ಮರಗಳ್ಳತನ ಮಾಡುವವರಿಂದ ಅರಣ್ಯನಾಶ ಆಗುತ್ತಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಉಳಿಸುವ ಕುರಿತು ಚರ್ಚಿಸಲು ಪೊನ್ನಂಪೇಟೆ ಕೃಷಿ ವಿಶ್ವವಿದ್ಯಾಲಯದ ಅರಣ್ಯ ಕಾಲೇಜು, ಭೋಪಾಲ್ನ ಇಂದಿರಾಗಾಂಧೀ ರಾಷ್ಟ್ರೀಯ ಮಾನವ್ ಸಂಗ್ರಹಾಲಯ ಮತ್ತು ಜಿಲ್ಲೆಯ ಇತರ ಪರಿಸರ ಸಂಘಟನೆಗಳು ಸಂಯುಕ್ತವಾಗಿ ಈ ವಿಚಾರ ಸಂಕಿರಣವನ್ನು ಏರ್ಪಡಿಸಿವೆ.
ಕೊಡಗು ಜಿಲ್ಲೆಯ 4104 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ 1214 ದೇವರಕಾಡುಗಳನ್ನು ಪಟ್ಟಿ ಮಾಡಲಾಗಿದೆ. ಜಗತ್ತಿನ ಯಾವುದೇ ವನಪ್ರದೇಶದಲ್ಲಿ ಇಲ್ಲದಂತಹ ದಟ್ಟ ಅರಣ್ಯ ಇಲ್ಲಿದ್ದು, ವೈವಿಧ್ಯಮಯ ಸಸ್ಯಗಳು, ಗಿಡ - ಮರಗಳು ಮಿಗಿಲಾಗಿ ಪ್ರಾಣಿ ಸಂಕುಲ ಇದೆ. ಈ ಕಾಡುಗಳ ಉಸ್ತುವಾರಿಯನ್ನು ಸ್ಥಳೀಯ ದೇವಾಲಯಗಳೇ ನೋಡಿಕೊಳ್ಳುತ್ತವೆ. ಹೀಗಾಗಿ ದೇವರಕಾಡು ಪರಿಕಲ್ಪನೆಗೆ ಹೆಚ್ಚಿನ ಮಹತ್ವ ಬಂದಿದೆ.
ಅಕ್ಟೋಬರ್ 15 ಮತ್ತು 16ರಂದು ನಡೆಯಲಿರುವ ವಿಚಾರ ಸಂಕಿರಣದಲ್ಲಿ 50 ದೇವಾಲಯಗಳ ಸಮಿತಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪರಿಸರ ಪ್ರೇಮಿಗಳು ಪಾಲ್ಗೊಳ್ಳುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications