ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಕ್ತರಿಗೆ ಹೆಚ್ಚಿನ ಸೌಲಭ್ಯ: ನಂಜನಗೂಡಿಗೆ 3.5ಕೋಟಿ ರು. ಬಿಡುಗಡೆ

By Staff
|
Google Oneindia Kannada News

ಬೆಂಗಳೂರು : ಬೆಂಗಳೂರಿನ ಬನಶಂಕರಿ, ನಂಜನಗೂಡಿನ ಶ್ರೀಕಂಠೇಶ್ವರ, ಮೈಸೂರು ಚಾಮುಂಡೇಶ್ವರಿ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಾಲಯಗಳಿಗೆ ಬರುವ ಭಕ್ತರಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ಬಾಬು ರಾವ್‌ ಚಿಂಚನಸೂರ್‌ ತಿಳಿಸಿದ್ದಾರೆ.

ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ 70 ಲಕ್ಷ ರುಪಾಯಿ, ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ದಾಸೋಹ ಭವನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 4 ಕೋಟಿ ರುಪಾಯಿ ಮತ್ತು ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ 70 ಲಕ್ಷ ರುಪಾಯಿ, ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ 3.5 ಕೋಟಿ ರುಪಾಯಿ ಬಿಡುಗಡೆ ಮಾಡಿರುವುದಾಗಿ ಸಚಿವರು ತಿಳಿಸಿದರು.

Kollur templeಕರ್ನಾಟಕ ರಾಜ್ಯ ಪರಂಪರೆ ಹಾಗೂ ಧಾರ್ಮಿಕ ನೆಲೆವೀಡು. ಇಲ್ಲಿ 43217 ದೇವಾಲಯಗಳಿದ್ದು, ಈ ಎಲ್ಲ ದೇವಾಲಯಗಳಿಗೆ ಅನ್ವಯವಾಗುವಂತೆ ಏಕರೂಪ ಕಾಯಿದೆಯನ್ನು ಜಾರಿಗೊಳಿಸಲು ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X