ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಭಕ್ತರಿಗೆ ಹೆಚ್ಚಿನ ಸೌಲಭ್ಯ: ನಂಜನಗೂಡಿಗೆ 3.5ಕೋಟಿ ರು. ಬಿಡುಗಡೆ
ಬೆಂಗಳೂರು : ಬೆಂಗಳೂರಿನ ಬನಶಂಕರಿ, ನಂಜನಗೂಡಿನ ಶ್ರೀಕಂಠೇಶ್ವರ, ಮೈಸೂರು ಚಾಮುಂಡೇಶ್ವರಿ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಾಲಯಗಳಿಗೆ ಬರುವ ಭಕ್ತರಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ಬಾಬು ರಾವ್ ಚಿಂಚನಸೂರ್ ತಿಳಿಸಿದ್ದಾರೆ.
ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ 70 ಲಕ್ಷ ರುಪಾಯಿ, ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ ದಾಸೋಹ ಭವನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 4 ಕೋಟಿ ರುಪಾಯಿ ಮತ್ತು ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ 70 ಲಕ್ಷ ರುಪಾಯಿ, ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ 3.5 ಕೋಟಿ ರುಪಾಯಿ ಬಿಡುಗಡೆ ಮಾಡಿರುವುದಾಗಿ ಸಚಿವರು ತಿಳಿಸಿದರು.
ಕರ್ನಾಟಕ ರಾಜ್ಯ ಪರಂಪರೆ ಹಾಗೂ ಧಾರ್ಮಿಕ ನೆಲೆವೀಡು. ಇಲ್ಲಿ 43217 ದೇವಾಲಯಗಳಿದ್ದು, ಈ ಎಲ್ಲ ದೇವಾಲಯಗಳಿಗೆ ಅನ್ವಯವಾಗುವಂತೆ ಏಕರೂಪ ಕಾಯಿದೆಯನ್ನು ಜಾರಿಗೊಳಿಸಲು ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.
Comments
Story first published: Wednesday, October 11, 2000, 5:30 [IST]