ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ 800 ಅರ್ಜಿಗಳು
ಬೆಂಗಳೂರು : ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ 800 ಅರ್ಜಿಗಳು ಬಂದಿವೆ. ಅರ್ಹರನ್ನು ಆಯ್ಕೆ ಮಾಡಲು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಮಿತಿಯನ್ನು ರಚಿಸಲಾಗಿದೆ.
ಸಮಿತಿಯಲ್ಲಿ ವಾರ್ತಾ ಸಚಿವ ಬಿ. ಕೆ. ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್, ಕಂದಾಯ ಸಚಿವ ಶ್ರೀಕಂಠಯ್ಯ, ಭಾರಿ ನೀರಾವರಿ ಸಚಿವ ಎಚ್. ಕೆ. ಪಾಟೀಲ್ ಇದ್ದು, ಅಕಾಡಮಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
Comments
Story first published: Friday, October 13, 2000, 5:30 [IST]