ನವೆಂಬರ್ನಲ್ಲಿ ವರ್ಷ ತುಂಬಿದ ಕೃಷ್ಣ ಸಚಿವ ಸಂಪುಟ ಪುನಾರಚನೆ ?ಕೆಲವು ಕಿರಿಯ ಸಚಿವರಿಗೆ ಖೋಕ್, ಹೊಸ ಮುಖಗಳ ನಿರೀಕ್ಷೆ
ಬೆಂಗಳೂರು : ಈ ತಿಂಗಳ 23ರಿಂದ ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭ. ಈ ಅಧಿವೇಶಾನಂತರ ವರ್ಷ ತುಂಬಿದ ತಮ್ಮ ಸಚಿವ ಸಂಪುಟವನ್ನು ಪುನಾರಚಿಸುವ ಬಗ್ಗೆ ಹಾಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವ ಬಗ್ಗೆ ಮುಖ್ಯಮಂತ್ರಿ ಕೃಷ್ಣ ಚಿಂತಿಸಿದ್ದಾರೆ.
ಈ ಬಗ್ಗೆ ತಮ್ಮ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳ ಜತೆ ಕೃಷ್ಣ ಅನೌಪಚಾರಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ, ಸಚಿವ ಸಂಪುಟದ ಪುನಾರಚನೆಯ ನಿರ್ದಿಷ್ಟ ದಿನ ಯಾವುದೆಂದು ತಿಳಿದುಬಂದಿಲ್ಲ. ಬಹುತೇಕ ನವೆಂಬರ್ ತಿಂಗಳಿನಲ್ಲಿ ಸಂಪುಟಕ್ಕೆ ಹೊಸ ಮುಖಗಳು ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಎಂ.ಆರ್. ಸೀತಾರಾಮ್ ಅವರ ಹೆಸರೂ ಕೇಳಿಬರುತ್ತಿದೆ.
ಕೃಷ್ಣ ಅವರು ಈ ಹಿಂದೆ ತಿಳಿಸಿದ್ದಂತೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಮೌಲ್ಯ ಮಾಪನದಲ್ಲಿ ತೊಡಗಿದ್ದಾರೆ. ಎಲ್ಲ ಇಲಾಖೆಗಳ ಕಾರ್ಯವೈಖರಿಯ ಬಗ್ಗೆಯೂ ಪರಿಶೀಲನೆ ನಡೆಸುವ ಪ್ರಕ್ರಿಯೆಯನ್ನು ಮುಖ್ಯಮಂತ್ರಿಗಳು ಆರಂಭಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತ ವಲಯದಿಂದ ತಿಳಿದುಬಂದಿದೆ.
ಒಂದು ವರ್ಷದ ಅವಧಿಯಲ್ಲಿ ಯಾವುದೇ ಬಹಿರಂಗ ಭಿನ್ನಮತವನ್ನು ಎದುರಿಸದ ಮುಖ್ಯಮಂತ್ರಿಗಳು, ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಉದ್ಭವಿಸಬಹುದಾದ ಅಸಮಾಧಾನಗಳ ಬಗ್ಗೆಯೂ ಪೂರ್ವಾಲೋಚನೆ ಮಾಡಿದ್ದಾರೆ. ಈ ಸಂಬಂಧ ಅಧಿವೇಶನದ ಬಳಿಕ ಎಲ್ಲ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸುವ ಯೋಚನೆ ಮುಖ್ಯಮಂತ್ರಿಗಳಿಗಿದೆಯಂತೆ.
ಅಧಿವೇಶನ ಪೂರ್ವದ ಶಾಸಕಾಂಗ ಸಭೆಯಲ್ಲಿ ಕೂಡ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳ ಆಪ್ತರು ತಿಳಿಸಿದ್ದಾರೆ. ಸಚಿವ ಸಂಪುಟ ಪುನಾರಚನೆಯ ನಂತರ ಆಗಬಹುದಾದ ರಾಜಕೀಯ ಬೆಳವಣಗೆಗಳನ್ನು ಗಮನದಲ್ಲಿಟ್ಟುಕೊಂಡು, ಈ ವಿಷಯವನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸುವ ಬಗ್ಗೆ ಕೂಡ ಮುಖ್ಯಮಂತ್ರಿಗಳು ತಮ್ಮ ಆಪ್ತ ಸಲಹೆಗಾರರೊಂದಿಗೆ ಮಾತುಕತೆ ನಡೆಸಿದ್ದಾರೆ.
ಎಲ್ಲ ವಿಷಯಗಳಲ್ಲೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುವುದೇ ತಮ್ಮ ಯಶಸ್ಸಿನ ಗುಟ್ಟು ಎಂದು ಬುಧವಾರ ಪ್ರಕಟಿಸಿದ್ದ ಮುಖ್ಯಮಂತ್ರಿಗಳು ಈಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ಎಲ್ಲರ ಸಹಮತ ಪಡೆದು, ಅಲ್ಪ ಬದಲಾವಣೆಗಳೊಂದಿಗೆ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ. ಎಲ್ಲಕ್ಕಿಂತಲೂ ಮಿಗಿಲಾಗಿ ಕೆಲವು ಕಿರಿಯ ಸಚಿವರುಗಳು ತಮ್ಮ ಖಾತೆಯನ್ನು ಕಳೆದುಕೊಳ್ಳುವ ಸಂಭವ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications