ಎನ್ಡಿಎ ವರ್ಷದ ಸಂಭ್ರಮಕ್ಕೆ ಆರೆಸ್ಸೆಸ್ ಅಪಸ್ವರ
ಆಗ್ರಾ: ಶುಕ್ರವಾರದಿಂದ ಇಲ್ಲಿ ಪ್ರಾರಂಭವಾದ ಆರೆಸ್ಸೆಸ್ ಸಮಾವೇಶ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಎಂದು ಟೀಕಿಸಿದೆ.
ಯಾವುದೇ ನಾಯಕ ಅಥವಾ ಪಕ್ಷದ ಹೆಸರು ಹೇಳದೆ, ಎನ್ಡಿಎ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಹೇಳಿರುವ ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ಮೋಹನ್ರಾವ್ ಭಾಗವತ್, ಸರಕಾರದಲ್ಲಿರುವ ಕೆಲವು ವ್ಯಕ್ತಿಗಳು ಹಲವಾರು ವಿಷಯಗಳಲ್ಲಿ ಒತ್ತಡಕ್ಕೆ ಮಣಿದು ರಾಜಿ ಮಾಡಿಕೊಳ್ಳುತ್ತಿದ್ದಾರೆ ಯಾವುದೇ ರಂಗಗಳಲ್ಲಿ ನಿರೀಕ್ಷಿತ ಫಲಿತಾಂಶ ದಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಲ್ಲ ವಿಚಾರಗಳಲ್ಲಿ ರಾಜಿ: ಸಂಘದ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಏರ್ಪಡಿಸಲಾದ ರಾಷ್ಟ್ರೀಯ ರಕ್ಷಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ದೇಶ ಹೊರಲಾಗದ ಸಾಲದ ಬಲೆಯಲ್ಲಿ ಬಿದ್ದಿದೆ ಇದರಿಂದ ರಾಷ್ಟ್ರೀಯ ಹಿತಾಸಕ್ತಿ ವಿಚಾರಗಳಲ್ಲೂ ರಾಜಿ ಮಾಡಿಕೊಳ್ಳಲಾಗುತ್ತಿದೆ. ಆರೆಸ್ಸೆಸ್ ಯಾವುದೇ ನಿರ್ಧಿಷ್ಟ ಪಕ್ಷವನ್ನು ಬೆಂಬಲಿಸುತ್ತಿಲ್ಲ ಬದಲಾಗಿ ರಾಷ್ಟ್ರೀಯ ಹಿತಾಸಕ್ತಿಯನ್ನು ಮಾತ್ರ ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದ್ದಾರೆ.
ಚರ್ಚ್ಗಳು ಮತಾಂತರ ಕೆಲಸದಲ್ಲಿ ಭಾಗಿಗಳಾಗಿವೆ ಎಂದು ತೀರ್ವ ವಾಗ್ದಾಳಿ ನಡೆಸಿದ ಅವರು, ಈಶಾನ್ಯ ರಾಜ್ಯಗಳಲ್ಲಿ ಕ್ರೆೃಸ್ತರ ಹಿಡಿತ ಜಾಸ್ತಿಯಾಗುತ್ತಿದ್ದು ಅವರು ಪ್ರತ್ಯೇಕತಾವಾದಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿರುವ ಎನ್ಡಿಎ ಸರಕಾರಕ್ಕೆ ಅದರಲ್ಲೂ ಬಿಜೆಪಿಗೆ ತನ್ನ ಬಂಬಲಿತ ಸಂಘಟನೆಯಿಂದ ಈ ಟೀಕೆ ಬಂದಿರುವುದರಿಂದ ತೀರ್ವ ಮುಜುಗರ ಎದುರಿಸುವ ಪರಿಸ್ಥಿತಿ ಉಂಟಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications