ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ ಬಿಡುಗಡೆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ : ಮುಖ್ಯಮಂತ್ರಿ ಕೃಷ್ಣ
ಧಾರವಾಡ : ಕಳೆದ 78 ದಿನಗಳಿಂದಲೂ ವೀರಪ್ಪನ್ ವಶದಲ್ಲಿರುವ ರಾಜ್ಕುಮಾರ್ ಹಾಗೂ ಇತರ ಇಬ್ಬರು ಒತ್ತೆಯಾಳುಗಳ ಬಿಡುಗಡೆ ಸಂಬಂಧ ತಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ಸೋಮವಾರ ಇಲ್ಲಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಲ್ಲಿ ಮಾತನಾಡುತ್ತಿದ್ದ ಕೃಷ್ಣ ಅವರು, ಈ ಅಪಹರಣ ಪ್ರಕರಣವನ್ನು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ನೋಡಿಕೊಳ್ಳುತ್ತಿದ್ದು, ರಾಜ್ಕುಮಾರ್ ಬಿಡುಗಡೆ ಆಗಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದರು.
ಪ್ರಸಕ್ತ ಸನ್ನಿವೇಶದಲ್ಲಿ ತಾವು ಚೆನ್ನೈಗೆ ಧಾವಿಸಿ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರೊಂದಿಗೆ ಮಾತುಕತೆ ನಡೆಸುವ ಯಾವುದೇ ಯೋಜನೆ ಇಲ್ಲ ಎಂದೂ ಪತ್ರಕರ್ತರ ಪ್ರಶ್ನೆಯಾಂದಕ್ಕೆ ಉತ್ತರಿಸುತ್ತಾ ಕೃಷ್ಣ ತಿಳಿಸಿದರು. (ಯು.ಎನ್.ಐ)
ಮುಖಪುಟ / ರಾಜ್ ಅಪಹರಣ
Comments
Story first published: Monday, October 16, 2000, 5:30 [IST]