ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದಾರೀಕರಣ ಮತ್ತು ರೈತ: ಸದ್ಯದಲ್ಲೇ ವಿವಿಧ ರಾಜ.್ಯಗಳ ಕೃಷಿ ಸಚಿವರ ಸಭೆ

By Staff
|
Google Oneindia Kannada News

ಧಾರವಾಡ : ಉದಾರೀಕರಣದಿಂದ ಕೃಷಿ ಕ್ಷೇತ್ರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಚರ್ಚಿಸಲು ರಾಜ್ಯ ಕೃಷಿ ಸಚಿವರ ನೇತೃತ್ವದಲ್ಲಿ ವಿವಿಧ ರಾಜ್ಯಗಳ ಕೃಷಿ ಸಚಿವರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯ ಮಂತ್ರಿಗಳ ಸಭೆ ಕರೆಯುವಂತೆ ಕೇಂದ್ರ ಸರಕಾರವ-ನ್ನು ಒತ್ತಾ-ಯಿ-ಸು-ವ ಪ್ರಸ್ತಾಪ ತ-ಮ್ಮ ಮುಂದಿ-ಲ್ಲ ಎಂದು ಸ್ಪಷ್ಟಪಡಿಸಿದರು. ವಿಶ್ವ ವ್ಯಾಪಾರ ಒಪ್ಪಂದದ ಪ್ರಕಾರ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಹೇರುವುದನ್ನು ತಡೆಯಲು ಕೇಂದ್ರ ಹಣಕಾಸು ಸಚಿವ ಹಾಗೂ ಕೃಷಿ ಸಚಿವರನ್ನು ಸದ್ಯದಲ್ಲಿಯೇ ಭೇಟಿಯಾಗಿ ಚರ್ಚಿ-ಸು-ವು-ದಾ-ಗಿ ಕೃಷ್ಣ ಹೇಳಿದರು.

ಉತ್ತರ ಕರ್ನಾಟಕದಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ಕುರಿತಂತೆ ಸರಕಾರವು ಕ್ಯಾಬಿನೆಟ್‌ ನಿರ್ಧಾರಕ್ಕೆ ಬದ್ಧವಾಗಿದೆ. ನವೆಂಬರ್‌ ಒಂದರಂದು ಹುಬ್ಬಳ್ಳಿಯಲ್ಲಿ ಸರ್ಕಿಟ್‌ ಬೆಂಚ್‌ ಸ್ಥಾಪಿಸುವ ಬಗ್ಗೆ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆಯಲಾಗಿದೆ. ಆದರೆ ಈವರೆಗೆ ಯಾವುದೇ ಉತ್ತರ ದೊರೆತಿಲ್ಲ ಎಂದು ಕೃಷ್ಣ ಹೇಳಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X