ನೆರೆಮನೆಯಲ್ಲಿ ನೆರೆಹಾವಳಿ ಬೆದರಿಕೆ
ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರದ ಜ್ವರ ಇಳಿಯತೊಡಗಿಂತೆಯೇ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಒರಿಸ್ಸಾಗಳು ಮತ್ತೊಮ್ಮೆ ಚಂಡಮಾರುತದ ಭಯದಿಂದ ತತ್ತರಿಸತೊಡಗಿವೆ.
ಪಶ್ಟಿಮಬಂಗಾಳದಲ್ಲಿ ಆಗಿರುವ ವಾಯುಭಾರ ಕುಸಿತದಿಂದ ಮತ್ತೊಮ್ಮೆ ವಿಪತ್ತು ಎದುರಿಸಲು ಸಜ್ಜಾಗತೊಡಗಿರುವ ಎರಡೂ ರಾಜ್ಯಗಳ ತೀರಪ್ರದೇಶದ ಜನ ಭಯಭೀತರಾಗಿದ್ದಾರೆ. ತೀರಪ್ರದೇಶದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿ ಕುರಿತು ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿದ ಸುದ್ದಿ ಬಂದಿದೆ. ಬಂಗಾಳಕೊಲ್ಲಿ ತೀರಪ್ರದೇಶದ ನೈರುತ್ಯಕ್ಕೆ 500 ಕಿ.ಮೀ ವ್ಯಾಪ್ತಿಯಲ್ಲಿ ಕೇಂದ್ರೀಕೃತಗೊಂಡಿರುವ ಚಂಡಮಾರುತದಿಂದ ಭಾರೀ ಮಳೆ ನಿರೀಕ್ಷೆ ಇದೆ.
ಗಂಟೆಗೆ 60ರಿಂದ 65 ಕಿ.ಮೀ ವೇಗದಲ್ಲಿ ಬೀಸಲಿರುವ ಚಂಡಮಾರುತದಿಂದಾಗಿ ತೀರಪ್ರದೇಶದ ಮೀನುಗಾರರು ಕಡಲಿಗಿಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ. ಚಂಡಮಾರುತ ಈಶಾನ್ಯ ದಿಕ್ಕಿನತ್ತ ಚಲಿಸುತ್ತಿದೆ. ಎರಡೂ ರಾಜ್ಯಗಳ ತೀರಪ್ರದೇಶದ ಜನ ತಮ್ಮ ಕಣ್ಣು-ಕಿವಿಗಳನ್ನು ಟೀವಿ, ರೇಡಿಯೋದತ್ತಲೇ ಇಟ್ಟಿದ್ದಾರೆ.
ಇತ್ತ ರಾಜ್ಯದ ಉತ್ತರ ಒಳನಾಡು ಮತ್ತು ತೀರಪ್ರದೇಶದ ಕೆಲವೆಡೆ ಮಳೆಯಾಗಿದೆ. ಒಟ್ಟಾರೆ ಮುಂಗಾರು ದುರ್ಬಲವಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಉಷ್ಣಾಂಶದಲ್ಲೂ ಗರಿಷ್ಠ ಬದಲಾವಣೆ ಕಂಡುಬಂದಿದೆ. ಮಂಗಳವಾರದ ಮುಂಜಾನೆಯವರೆಗಿನ ಹವಾಮನ್ಸೂಚನೆಯಂತೆ ರಾಜ್ಯದ ಕೆಲವೆಡೆ ಮಳೆಯಾಗುವ ಸಂಭವ ಇದೆ ಎಂದು ಹಾವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.
ಮುಖಪುಟ / ಹವಾ ಹವಾ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications