ಸಂಧಾನ ಮಾರ್ಗಕ್ಕೇ ಜೋತು ಬಿದ್ದ ಸರ್ವಪಕ್ಷ ನಾಯಕರ ಸಭೆ
ಬೆಂಗಳೂರು : ಕಾಡುಗಳ್ಳ ವೀರಪ್ಪನ್ ತಾನು ಅಪಹರಿಸಿದ್ದ ರಾಜ್ ಅವರ ಅಳಿಯ ಎಸ್. ಎ. ಗೋವಿಂದರಾಜ್ ಅವರನ್ನು ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಅವಲೋಕಿಸಲು ಮಂಗಳವಾರ ಕರೆದಿದ್ದ ಸರ್ವಪಕ್ಷ ಸಭೆ ಹಿಂದಿನ ಸಂಧಾನ ಮಾರ್ಗವನ್ನೇ ಮುಂದುವರಿಸಲು ನಿರ್ಧರಿಸಿದೆ.
ರಾಜ್ ಅವರ ಸುರಕ್ಷಿತ ಬಿಡುಗಡೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ತೆಗೆದುಕೊಂಡಿರುವ ನಿರ್ಧಾರಗಳಿಗೆ ತಮ್ಮ ಪಕ್ಷದ ಬೆಂಬಲ ಇದೆ. ಹಾಗೆಂದ ಮಾತ್ರಕ್ಕೆ ಎಲ್ಲಕ್ಕೂ ತಮ್ಮ ಬೆಂಬಲ ಇದೆ ಎಂದಲ್ಲ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸಭೆಯ ನಂತರ ತಿಳಿಸಿದ್ದಾರೆ.
ತಾಳ್ಮೆಯಿಂದ ಸಂಧಾನ ಮುಂದುವರಿಸುವಂತೆ ಜಾತ್ಯತೀತ ಜನತಾದಳದ ನಾಯಕ ಕೆ. ಎಚ್. ಶ್ರೀನಿವಾಸ್ ಸಲಹೆ ಮಾಡಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಯಿಂದ, ರಾಜ್ ಬಿಡುಗಡೆ ಸಂಬಂಧ ಸರಕಾರ ಸಕಾರಾತ್ಮಕ ನಿರ್ದೇಶನ ಪಡೆಯುವಲ್ಲಿ ವಿಫಲವಾದರೆ ಮುಂದೆ ಕೈಗೊಳ್ಳಬೇಕಾದ ಪರ್ಯಾಯ ಕಾನೂನು ಕ್ರಮಗಳ ಬಗ್ಗೆ ಯೋಚಿಸಬೇಕೆಂದೂ ಪ್ರತಿಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ. ಈ ನಡುವೆ ಸಂಪುಟ ಸಭೆ ನಡೆಸಿ ಮುಖ್ಯಮಂತ್ರಿ ಕೃಷ್ಣ ಮುಂದಿನ ಕ್ರಮಗಳ ಬಗ್ಗೆ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿದ್ದಾರೆ.
ಕಮಾಂಡೋ ಕಾರ್ಯಾಚರಣೆ ಬೇಡ : ಮುಖ್ಯಮಂತ್ರಿಗಳಿಗೆ ತಮ್ಮ ಬಿಡುಗಡೆ ಕುರಿತು ಗೋವಿಂದರಾಜ್ ವಿವರಣೆ ನೀಡಿದ ನಂತರ ವರದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ , ಕೇಳಲಾದ ಪ್ರಶ್ನೆಯಾಂದಕ್ಕೆ ಉತ್ತರಿಸಿದ ರಾಜ್ಕುಮಾರ್ ಅವರ ಶಿವರಾಜ್ ಕುಮಾರ್, ತಮ್ಮ ತಂದೆಯ ಪ್ರಾಣ ಅಪಾಯದಲ್ಲಿರುವ ಈ ಸಂದರ್ಭದಲ್ಲಿ ವೀರಪ್ಪನ್ ವಿರುದ್ಧ ಕಮಾಂಡೋ ಕಾರ್ಯಚರಣೆ ನಡೆಯುವುದಕ್ಕೆ ತಮ್ಮ ಕುಟುಂಬದ ಸಹಮತ ಇಲ್ಲ ಎಂದು ಹೇಳಿದ್ದಾರೆ.
ಗೋವಿಂದರಾಜ್ ಬಿಡುಗಡೆ ತಮ್ಮ ಸಾಧನೆ : ಈ ಮಧ್ಯೆ ಚೆನ್ನೈ ತಲುಪಿರುವ ಸಂಧಾನಕಾರರ ತಂಡ , ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಹೇಳಿಕೆ ನೀಡಿ, ತಮ್ಮ ಸಂಧಾನದ ಫಲಶ್ರುತಿಯಿಂದ ಗೋವಿಂದರಾಜ್ ಬಿಡುಗಡೆಯಾಗಿದೆ. ಗೋವಿಂದ್ರಾಜ್ ಬಿಡುಗಡೆಯೇ ತಮ್ಮ ಸಾಧನೆ ಎಂದು ಹೇಳಿದ್ದಾರೆ.
ಅಭಿನಂದನೆ : ಐದನೇ ಬಾರಿಗೆ ಸಂಧಾನಕ್ಕೆ ತೆರಳಿ, ತಮ್ಮ ಸೋದರ ಗೋವಿಂದ್ರಾಜ್ ಅವರನ್ನು ಬಿಡಿಸಿಕೊಂಡು ಬಂದ ಸಂಧಾನಕಾರರನ್ನು ಪಾರ್ವತಮ್ಮ ರಾಜ್ಕುಮಾರ್ ಅಭಿನಂದಿಸಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications