ಉತ್ತರ ಕನ್ನಡ ಜಿಲ್ಲೆಯ ನದಿಗಳ ನೀರಿನ ಬಳಕೆಗೆ ಚಿಂತಕರ ಯೋಜನೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಐದು ನದಿಗಳ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಬಗ್ಗೆ ಕ್ರಿಯಾಯೋಜನೆಯಾಂದನ್ನು ಸರಕಾರಕ್ಕೆ ಸಲ್ಲಿಸಲು ಶಿರಸಿಯ ಚಿಂತಕರ ಚಾವಡಿ ನಿರ್ಧರಿಸಿದೆ.
ಕರ್ನಾಟಕ ಸರಕಾರ ರಾಜ್ಯದಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳ ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳುವ ಯೋಜನೆಗೆ ವಿಶ್ವಬ್ಯಾಂಕ್ ನೆರವು ಪಡೆಯಲುದ್ದೇಶಿಸಿರುವ ವರದಿಗಳ ಹಿನ್ನೆಲೆಯಲ್ಲಿ ಶಿರಸಿಯ ಚಿಂತಕರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜಿ.ಎಸ್. ಉಪ್ಪೋಣಿಯವರೂ ಸೇರಿದಂತೆ ಜಿಲ್ಲೆಯ ಹಲವು ಚಿಂತಕರು ಜಿಲ್ಲೆಯಲ್ಲಿ ಹರಿಯುವ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ಮತ್ತು ವೆಂಕಟಾಪುರ ನದಿಗಳ ನೀರನ್ನು ಕರಾವಳಿ ಕರ್ನಾಟಕದ ತಾಲೂಕುಗಳ ನೀರಾವರಿಗೆ ಬಳಸಿಕೊಳ್ಳುವ ಯೋಜನೆ ಸಿದ್ಧಪಡಿಸಿ, ಮೂರ್ನಾಲ್ಕು ವರ್ಷಗಳ ಹಿಂದೆಯೇ ಜಿಲ್ಲಾ ಪಂಚಾಯ್ತಿಗೆ ಸಲ್ಲಿಸಿದ್ದರು. ಸರಕಾರದ ಇಲಾಖೆಗೂ ಈ ಯೋಜನೆಯ ಪ್ರತಿ ಕಳುಹಿಸಲಾಗಿತ್ತು.
ಆದರೆ, ಈ ಯೋಜನೆಯು ಆರ್ಥಿಕ ಕಾರಣಗಳ ಮೇಲೆ ಆ ಹಂತದಲ್ಲಿ ಕೈಬಿಡಲಾಗಿತ್ತು. ಆದರೆ, ಈಗ ವಿಶ್ವಬ್ಯಾಂಕ್ ನೆರವು ದೊರಕಲಿದೆ ಎಂಬ ಸುದ್ದಿ ಜಿಲ್ಲೆಯ ಚಿಂತಕರಲ್ಲಿ ಹೊಸ ಆಶಾಭಾವನೆಗಳನ್ನು ಹುಟ್ಟುಹಾಕಿದೆ. ಕೃಷ್ಣ ನೇತೃತ್ವದ ರಾಜ್ಯ ಸರಕಾರಕ್ಕೆ ವರ್ಷ ತುಂಬಿದ ಸಂದರ್ಭದಲ್ಲಿ ನೀರಾವರಿ ಯೋಜನೆಗಳಿಗೆ ಹಾಗೂ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿರುವುದರಿಂದ ಈ ಯೋಜನೆಗೂ ಚಾಲನೆ ಬರಬಹುದೆಂಬುದು ಚಿಂತಕರ ಅಭಿಪ್ರಾಯ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications