ವೀರಪ್ಪನ್ ಸಹಚರರ ಬಿಡುಗಡೆಗೆ ರಾಜ್ಯ ಸರಕಾರದ ಇಬ್ಬಂದಿ ನಿಲುವು
ಬೆಂಗಳೂರು : ರಾಜ್ ಬಿಡು-ಗ-ಡೆ ಸಂಬಂ-ಧ, ವೀರ-ಪ್ಪನ್ ಸಹ-ಚ-ರ-ರ-ನ್ನು ಬಿಡು-ಗ-ಡೆ-ಗೊ-ಳಿಸಲು ರಾಜ್ಯ ಸರ-ಕಾ-ರ ತಾ-ಳಿರು-ವ ಇಬ್ಬಂ-ದಿ ನಿಲು-ವಿ-ಗೆ ನಿಚ್ಚ-ಳ ಉದಾ-ಹ-ರ-ಣೆ ಇಲ್ಲಿ-ದೆ.
ಮೈಸೂರು ಜೈಲಿನಲ್ಲಿರುವ 51 ವೀರಪ್ಪನ್ ಸಹಚರರನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರಕಾರ ಮೈಸೂರಿನ ವಿಶೇಷ ಕೋರ್ಟ್ನಲ್ಲಿ ಮನವಿ ಸಲ್ಲಿಸಿರುವುದು, ಅದಕ್ಕೆ ವಿಶೇಷ ಕೋರ್ಟ್ ಅನುಮತಿ ನೀಡಿರುವುದನ್ನು ಸುಪ್ರೀಂಕೋರ್ಟ್ ತಡೆಹಿಡಿದಿರುವುದು ಸರಿಯಷ್ಟೆ.
ಇನ್ನೊಂದು ಪ್ರಕರಣ ನೋಡಿ, ಗಂಧದ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲಾಗಿದ್ದ 21 ವೀರಪ್ಪನ್ ಸಹಚರರ ಮೇಲಿನ ಮೊಕದ್ದಮೆಯನ್ನು ಮೈಸೂರಿನ ಹೆಚ್ಚುವರಿ ಸೆಷನ್ಸ್ ಕೋರ್ಟ್, ವಜಾ ಮಾಡಿ ಆರೋಪಿಗಳನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿದೆ.
21 ಸಹಚರರು ಯಾರು ?: ವೀರಪ್ಪನ್ ವಿರುದ್ದದ ವಿಶೇಷ ಕಾರ್ಯಾಚರಣೆಪಡೆಯ ಆಗಿನ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಕೆ.ಯು. ಶೆಟ್ಟಿ ಮತ್ತು ಮತ್ತು ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಎಂ. ಡಿ. ಸಿಂಗ್ ಅವರ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಸೊರಕೆ ಮಡುವಿನ ಹತ್ತಿರ ನಡೆದ ಗುಂಡಿನ ತೀವ್ರ ಚಕಮುಖಿಯ ನಂತರ 1991 ಏಪ್ರಿಲ್ 4ರಂದು ಬಂದಿಸಿ, ಅವರಿಂದ 740 ಕೆಜಿ ಶ್ರೀಗಂಧ ಮತ್ತು ಕೆಲವು ಆಯುಧಗಳನ್ನು ವಶಪಡಿಸಿಕೊಂಡಿತ್ತು.
ಮೈಸೂರಿನ ಹೆಚ್ಚುವರಿ ಸೆಷನ್ಸ್ ಕೋರ್ಟ್ನಲ್ಲಿ ಸುಮಾರು 9 ವರ್ಷ ನಡೆದ ವಿಚಾರಣೆ ನಂತರ ಏಪ್ರಿಲ್ 4. 2000ರಂದು ನ್ಯಾಯಾದೀಶರಾದ ರಾಧಾಕೃಷ್ಣ ಹೊಳ್ಳ ಅವರು ಬೇರೆ ಯಾವುದೇ ಕೊರ್ಟ್ನಲ್ಲಿ , ಯಾವುದೇ ವಿಚಾರವಾಗಿ ಮೊಕದ್ದಮೆ ಎದುರಿಸುತ್ತಿರಬಾರದು ಎಂಬ ಶರತ್ತಿನ ಮೇಲೆ 20 ಜನ ಆರೋಪಿಗಳನ್ನು ಖುಲಾಶೆಗೊಳಿಸಿದ್ದರು. ಆರೋಪಿಗಳಲ್ಲಿ ಒಬ್ಬ ನ್ಯಾಯಾಂಗ ವಶದಲ್ಲಿದ್ದಾಗ ಮೃತಪಟ್ಟಿದ್ದನು. ಈಗ ಈ ತೀರ್ಪಿನ ವಿರುದ್ದ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿದೆ. ಪದ್ಮರಾಜ್ ಮತ್ತು ಎಸ್. ಆರ್. ಬನ್ನೂರುಮಠ ಅವರನ್ನೊಳಗೊಂಡ ನ್ಯಾಯಪೀಠ, ಗುರುವಾರ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದು ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡಿದೆ.
(ಐಎಎನ್ಎಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications