ಅಪಹರಣ ಪ್ರಕರಣ : ನಿಲುವಳಿ ಸೂಚನೆಗೆ ಬಿಜೆಪಿ ಯತ್ನ
ಬೆಂಗಳೂರು : ರಾಜ್ ಅಪಹರಣ ಪ್ರಕರಣದ ವಿಷಯ ಪ್ರಸ್ತಾಪಿಸಲು ಪ್ರಶ್ನೋತ್ತರ ವೇಳೆಯನ್ನು ಮುಂದೂಡಬೇಕೆಂದು ಬಿಜೆಪಿ ಒತ್ತಾಯಿಸಿದ ಘಟನೆ ಮಂಗಳವಾರ ಸದನದಲ್ಲಿ ನಡೆಯಿತು. ಈ ಸಂಬಂಧ ನಿಲುವಳಿ ಸೂಚನೆಯನ್ನೂ ಮಂಡಿಸಲು ಪಕ್ಷ ಯತ್ನಿಸಿತು. ಬಿಜೆಪಿಯ ಈ ವಿಚಾರಕ್ಕೆ ಇತರ ಪ್ರತಿಪಕ್ಷಗಳು ಸಮ್ಮತಿ ನೀಡದೆ ಕೆಲಕಾಲ ವಾಗ್ವಾದ ನಡೆಯಿತು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿಯ ಜಗದೀಶ್ ಶಟ್ಟರ್, ಹೇಳಿಕೆ ನೀಡಿ ರಾಜ್ ಅಪಹರಣ ನಂತರದ ಪರಿಸ್ಥಿತಿ ಕುರಿತು ಚರ್ಚಿಸಲು ಸಭಾಧ್ಯಕ್ಷರ ಅನುಮತಿ ಕೇಳಿದರು. ಇದಕ್ಕೆ ತಮ್ಮ ಮಿತ್ರಪಕ್ಷಗಳು ಸಮ್ಮತಿ ನೀಡದೆ ಗೊಂದಲ ಉಂಟಾದಾಗ ಮಧ್ಯೆ ಪ್ರವೇಶಿಸಿದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಪ್ರಕರಣದ ಸಂಬಂಧ ವೀರಪ್ಪನ್ ಬೇಡಿಕೆಯ ಟಾಡಾ ಬಂಧಿಗಳ ಬಿಡುಗಡೆ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಸದನದಲ್ಲಿ ಈ ಹಂತದಲ್ಲಿ ವಿಷಯ ಪ್ರಸ್ತಾಪಿಸುವುದು ಸರಿಯಲ್ಲ ಎಂದರು. ಖರ್ಗೆ ಜೊತೆಗೆ ದನಿಗೂಡಿಸಿದ ಕಾನೂನು ಮತ್ತು ಸಂಸದೀಯ ಸಚಿವ ಡಿ.ಬಿ ಚಂದ್ರೇಗೌಡ, ಸದನದಲ್ಲಿ ನಡೆಯುವ ಚರ್ಚೆಯಿಂದ ಸುಪ್ರೀಂಕೋರ್ಟ್ ತೀರ್ಪಿಗೆ ಸಂಬಂಧಿಸಿರುವುದರಿಂದ ಚರ್ಚೆ ಬೇಡ . ಇಷ್ಟಲ್ಲದೆ ಅಪಹರಣ ಪ್ರಕರಣದ ಸಂಬಂಧ ಪ್ರತಿ ನಿರ್ಧಾರ ಕೈಗೊಂಡಾಗಲೂ ಸರಕಾರ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದೆ. ರಾಜ್ಯ ಸರಕಾರಗಳ ನಿರ್ಧಾರಗಳ ಬಗ್ಗೆ ಪ್ರಧಾನಿ ವಾಜಪೇಯಿ ಅವರೇ ಸಮ್ಮತಿ ಸೂಚಿಸಿದ್ದಾರೆ ಎಂದು ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಈ ಸಂಬಂಧ ಚರ್ಚಿಸಲು ಸರಕಾರದ ಅಭ್ಯಂತರವೇನೂ ಇಲ್ಲ ಎಂದು ಇಬ್ಬರೂ ಸಚಿವರು ಸ್ಪಷ್ಟಪಡಿಸಿದರು.
ಜನತಾದಳ (ಯು) ನಾಯಕ ನಾಯಕ ಪಿ.ಜಿ.ಆರ್ ಸಿಂಧ್ಯಾ ಕೂಡಾ ಬೇರೆ ವಿಷಯಗಳನ್ನು ಚರ್ಚಿಸಲು ತಾವು ಬಯಸುವುದಾಗಿ ಹೇಳಿದರು. ಈ ಮುಂಚೆ ಹೇಳಿಕೆ ನೀಡಿದ್ದ ವಿರೋಧ ಪಕ್ಷದ ನಾಯಕ ಜಗದೀಶ್ ಶಟ್ಟರ್, ಸರ್ವಪಕ್ಷ ಸಭೆಯಲ್ಲಿ ತಮ್ಮ ಪಕ್ಷ ವ್ಯಕ್ತಪಡಿಸಿದ್ದ ಅಭಿಪ್ರಾಯಗಳಿಗೆ ತಾವು ಈಗಲೂ ಬದ್ದವಾಗಿದ್ದೇವೆ ಆದರೆ ಅಪಹರಣದ ನಂತರ ರಾಜ್ಯದಲ್ಲಿ ಆಡಳಿತ ಸ್ಥಗಿತಗೊಂಡಿದೆ ಎಂದು ಆಪಾದಿಸಿದ್ದರು.
ನಂತರ ಉಪಹಾರಕ್ಕೆ ಸಭಾಧ್ಯಕ್ಷ ವೆಂಕಟಪ್ಪ ಅವರು ಸದನ ಮುಂದೂಡಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications