ಹೈಟೆಕ್ ಸಿಟಿಗೊಂದು ಉಚಿತ ಹೈಟೆಕ್ ಆಸ್ಪತ್ರೆ
ಬೆಂಗಳೂರು : ಉಚಿತ ಚಿಕಿತ್ಸೆ ನೀಡುವ ಅತ್ಯಾಧುನಿಕ ಆಸ್ಪತ್ರೆ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಬಗ್ಗೆ ಕೇಳಿದ್ದೀರಾ ? ಅಂಥದ್ದೊಂದು ಆಸ್ಪತ್ರೆ ಸಿಲಿಕಾನ್ ವ್ಯಾಲಿಯ ವೈಟ್ಫೀಲ್ಡ್ಗೆ ಬರುತ್ತಿದೆ.
ವಿಶ್ಯವಿಖ್ಯಾತ ಹಿಂದೂ ಧಾರ್ಮಿಕ ನಾಯಕ ಸತ್ಯಸಾಯಿಬಾಬಾ ಅವರ ಶ್ರೀ ಸತ್ಯ ಸಾಯಿ ಸೆಂಟ್ರಲ್ ಟ್ರಸ್ಟ್ ಈ ಆಸ್ಪತ್ರೆಯನ್ನು 200ಕೋಟಿ ರುಪಾಯಿಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದೆ. ಪುಟ್ಟಪರ್ತಿಯಲ್ಲಿ ಇಂಥದೊಂದು ಆಸ್ಪತ್ರೆಯನ್ನು ಟ್ರಸ್ಟ್ , 1991ರಿಂದ ನಡೆಸುತ್ತಿದ್ದು, ಕಿಡ್ನಿ ಮತ್ತು ಕಣ್ಣುಗಳೂ ಸೇರಿದಂತೆ ಹೃದಯ ಮತ್ತು ನಾಳಗಳ ಶಸ್ತ್ರಚಿಕಿತ್ಸೆಗೆ ಆಧುನಿಕ ಸೌಲಭ್ಯಗಳನ್ನು ಉಚಿತವಾಗಿ ಒದಗಿಸುತ್ತಿದೆ. ಇಂಥ ಉಚಿತ ಚಿಕಿತ್ಸೆ ಬೆಂಗಳೂರಿನ ಆಸ್ಪತ್ರೆಯಲ್ಲೂ ದೊರೆಯಲಿದೆ.
52.26 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಮಕ್ಕಳು ಮತ್ತು ಯುವಕರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಎಲ್ಲ ವಿಧದ ಚಿಕೆತ್ಸೆಯೂ ಉಚಿತವಾಗಿದ್ದು, ನೌಕರವರ್ಗವೂ ಕೂಡಾ ಸ್ವಯಂ ಸೇವಕರಿಂದ ಕೂಡಿರುತ್ತದೆ. 330 ಹಾಸಿಗೆಗಳುಳ್ಳ ಈ ಕಟ್ಟಡದಲ್ಲಿ 12 ಶಸ್ತ್ರಚಿಕಿತ್ಸಾ ಕೊಠಡಿಗಳಿರುತ್ತವೆ. ಪ್ರತಿದಿನ ಸುಮಾರು 1000 ರೋಗಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶವಿದೆ. ಆಸ್ಪತ್ರೆ ನಡೆಸುವ ಖರ್ಚಿಗೆ ನಿಧಿ ಸ್ಥಾಪಿಸಲಾಗಿದೆ ಎಂದು ಟ್ರಸ್ಟ್ನ ವಕ್ತಾರರು ತಿಳಿಸಿದ್ದಾರೆ.
ಪರಿಸರ ಮಿತ್ರ : ಪರಿಸರ ರಕ್ಷಣೆಯನ್ನು ಆಧ್ಯತೆಯಾಗಿಟ್ಟುಕೊಂಡು ಆಸ್ಪತ್ರೆ ಪ್ರಾರಂಭವಾಗಲಿದೆ. ಆಸ್ಪತ್ರೆಯಲ್ಲಿ ಎಲ್ಲ ವಿಧದ ರೋಗಿಗಳ ಬಗ್ಗೆ ಮಾಹಿತಿ ವ್ಯವಸ್ಥೆ ಸೇರಿದಂತೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು. ಹೃದಯ ಮತ್ತು ನರಗಳಿಗೆ ಸಂಬಂಧಿಸಿದ ಎರಡು ವಿಶೇಷ ಘಟಕಗಳು ಇರಲಿವೆ. ಆಸ್ಪತ್ರೆಗೆ ಹೊಂದಿಕೊಂಡಂತೆ 3 ವರ್ಷ ತರಬೇತಿ ಇರುವ ನರ್ಸಿಂಗ್ ಕೋರ್ಸ್ ಪ್ರಾರಂಭಿಸಲು ಯೋಜಿಸಲಾಗಿದೆ.
ದಕ್ಷಿಣ ಭಾರತದ ಕೇಂದ್ರದಂತಿರುವ ಬೆಂಗಳೂರಿನಲ್ಲಿ ವಿಮಾನ, ರೈಲು ಮತ್ತು ಸಾರಿಗೆ ವ್ಯವಸ್ಥೆ ಸಮರ್ಪಕವಾಗಿರುವುದರಿಂದ ಸ್ಥಳವನ್ನು ಆಯ್ಕೆ ಮಾಡಲಾಗಿದೆ. ಕಟ್ಟಡ 354 ಸಾವಿರ ಚದುರ ಅಡಿಗಳ ಜಾಗದಲ್ಲಿ ಒಟ್ಟು ನಾಲ್ಕು ಅಂತಸ್ತುಗಳನ್ನು ಒಳಗೊಂಡಿರುತ್ತದೆ. ಅಗತ್ಯ ಸಿಬ್ಬಂಧಿಗಳಿಗಾಗಿ ಪಕ್ಕದಲ್ಲಿಯೇ ವಸತಿ ಸಂಕೀರ್ಣ ನಿರ್ಮಾಣವಾಗಲಿದೆ ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications