ಶನಿವಾರ ಸಂಜೆ ರಾಜ್ಯ ಕ್ರೆೃಸ್ತ ಯುವಜನ ಮೇಳ ಆರಂಭ
ಮಂಗಳೂರು: ನಗರದ ಬಜ್ಜೋಡಿ ನಂತೂರಿನ ಶಾಂತಿಕಿರಣ್ ಸಭಾಂಗಣದಲ್ಲಿ ಇಂದು (ಶನಿವಾರ) ಸಂಜೆ ರಾಜ್ಯ ಕ್ರೆೃಸ್ತ ಯುವಜನ ಮೇಳ ಪ್ರಾರಂಭವಾಗಲಿದೆ.
ರಾಷ್ಟ್ರ ನಿರ್ಮಾಣದತ್ತ ಯುವಜನತೆ ಎಂಬ ಧ್ಯೇಯ ವಾಕ್ಯದೊಂದಿಗೆ ಆರಂಭವಾಗಲಿರುವ ಈ ಮಹಾ ಸಮ್ಮೇಳನವನ್ನು ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು ಎಂದು ಕ್ಯಾಥೋಲಿಕ್ ಯುವ ಸಂಚಲನದ ರಾಜ್ಯ ಘಟಕದ ಅಧ್ಯಕ್ಷ ರೋಷನ್ ಕ್ಯಾಸ್ಟಲಿನೊ ಅವರು ಪತ್ರಕರ್ತರಿಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಮೊದಲ ಸಮಾರಂಭ ಇದಾಗಿದ್ದು, ಅಕ್ಟೋಬರ್ 31ರಂದು ಮ
ಧ್ಯಾಹ್ನ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಹಿಂದೂ ಧರ್ಮದ ಕುರಿತು ಮಂಗಳೂರಿನ ರಾಮಕೃಷ್ಣ ಮಿಷನ್ ಸಂಸ್ಥೆಯ ಅನುಪಮಾನಂದ ಸ್ವಾಮೀಜಿ, ಮುಸ್ಲಿಂ ಧರ್ಮ ಕುರಿತು ಶಾಂತಿ ಪ್ರಕಾಶನದ ನಿರ್ದೇಶಕ ಮಹಮ್ಮದ್ ಕುಂಞ, ಕ್ರೆೃಸ್ತ ಧರ್ಮ ಕುರಿತು ಬೆಳಗಾವಿ ದೇಶನೂರು ಮಠದ ಸ್ವಾಮಿ ಅಮಲಾನಂದ ಅವರು ಮಾತನಾಡುವರು.
ಸಮಾರೋಪ : ನವೆಂಬರ್ 1ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದೆ. ಮಂಗಳೂರಿನ ಬಿಷಪ್ ರೆ. ಡಾ . ಎಲೋಷಿಯಸ್ ಪಾಲ್ ಅಧ್ಯಕ್ಷತೆ ವಹಿಸುವರು. ಸಮ್ಮೇಳನದಲ್ಲಿ ಕನಿಷ್ಠ 500 ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆರ್ಚ್ ಬಿಷಪ್ ಅಲ್ಫೋನ್ಸ್ ಮಥಾಯಿಸ್, ಬಿಷಪ್ ಲಾರೆನ್ಸ್ ಮಕ್ಕುರಿkು, ಸಂಸದ ವಿನಯ್ ಕುಮಾರ್ ಸೊರಕೆ, ಶಾಸಕ ಅಭಯಚಂದ್ರ ಜೈನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ. ಸದಾನಂದ ಪೂಂಜ, ಮಾಜಿ ಸಚಿವ ಬ್ಲೇಷಿಯಸ್ ಡಿಸೋಜಾ, ನಗರಪಾಲಿಕೆ ಕಮೀಷನರ್ ಜೆ. ಆರ್. ಲೋಭೋ, ಜಿಲ್ಲಾ ಕ್ರೀಡೆ ಮತ್ತು ಯುವಜನ ನಿರ್ದೇಶಕ ಕರುಣಚಂದ್ರ, ಮೇಯರ್ ಸುಂದರಿ, ಉಪ ಮೇಯರ್ ಬಷೀರ್ ಬೈಕಂಪಾಡಿ, ಮಾಜಿ ಮೇಯರ್ ಜುಡಿಸ್ ಮಷ್ಕರೇನಾಸ್ ಪಾಲ್ಗೊಳ್ಳುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈಸ್ ವಿಕಾರ್ ಜನರಲ್ ಮೊ. ಎಡ್ವಿನ್ ಪಿಂಟೋ ವಹಿಸುವರು.
(ಇನ್ಫೋ ವರದಿ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications