ನವೆಂಬರ್ ಒಂದರಿಂದ ಸಿನೋ-ಇಂಡಿಯನ್ ಸಮಾವೇಶ
ಮಣಿಪಾಲ್: ಇಂಡೋ - ಅಮೆರಿಕನ್ ಗೆಳೆತನ ಸಮಾವೇಶವನ್ನು ಇತ್ತೀಚೆಗೆ ಯಶಸ್ವಿಯಾಗಿ ನಡೆಸಿದ ಬೆನ್ನ ಹಿಂದೆಯೇ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್(ಎಮ್ಎಎಚ್ಇ) ಮೂರು ದಿನಗಳ ಸಿನೋ-ಇಂಡೋ ಸಮಾವೇಶವನ್ನು ಹಮ್ಮಿಕೊಂಡಿದೆ.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡುತ್ತಿದ್ದ ಮಣಿಪಾಲ್ನ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಬಿ. ಎಂ. ಹೆಗ್ಡೆ, ಸಮಾವೇಶ ನವಂಬರ್ ಒಂದರಿಂದ ಮೂರರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಿನೋ-ಇಂಡಿಯನ್ ಶಾಂತಿ ಸಭೆಯನ್ನು ಕೇಂದ್ರ ಸಚಿವ ಮರಳಿ ಮನೋಹರ ಜೋಷಿ ಅವರು ಉದ್ಘಾಟಿಸಲಿದ್ದು, ಚೀನಾದ 12 ಬುದ್ದಿಜೀವಿಗಳು ಮತ್ತು ತಜ್ಞರು ಭಾಗವಹಿಸುತ್ತಿದ್ದಾರೆ. 1962ರ ಚೀನಾ-ಭಾರತ ಯುದ್ಧದ ನಂತರ ನಡೆಯುತ್ತಿರುವ ಮೊದಲ ಶಾಂತಿ ಸಮಾವೇಶ ಇದಾಗಿದೆ. ಈ ಸಭೆಯಲ್ಲಿ ಎರಡೂ ದೇಶಗಳ ಸಂಬಂಧ ಬಲಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ. ಸಭೆಯಲ್ಲಿ ಭಾರತದ 21ಮಂದಿಯ ನಿಯೋಗ ಭಾಗವಹಿಸಲಿದೆ.
ದ್ವಿಪಕ್ಷೀಯ ಚರ್ಚಿ : ಸಭೆಯಲ್ಲಿ ಎರಡೂ ದೇಶಗಳ ನಡುವೆ ಆರ್ಥಿಕ ಅಭಿವೃದ್ಧಿ ವಿಸ್ತರಣೆ ಮತ್ತು ಸಮಾನ ಆಸಕ್ತ ವಿಷಯಗಳ ಮೇಲೆ ದ್ವಿಪಕ್ಷೀಯ ಚರ್ಚಿ ನಡೆಸಲಾಗುವುದು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆ ಸೇರಿದಂತೆ ವಿವಿಧ ವಿಷಯಗಳು ಚರ್ಚೆಗೆ ಬರಲಿವೆ ಎಂದು ಜಿಯೋಪಾಲಿಟಿಕ್ಸ್ ವಿಭಾಗದ ಪ್ರೊ. ಎಂ. ಡಿ. ನಲ್ಪತ್ ತಿಳಿಸಿದ್ದಾರೆ.
ಇತ್ತೀಚೆಗೆ ಯಶಸ್ವಿಯಾಗಿ ನಡೆಸಿದ ಇಂಡೋ- ಅಮೆರಿಕನ್ ಸಭೆ ಉತ್ತಮ ಫಲಿತಾಂಶ ನೀಡುತ್ತಿದೆ. ಈ ಸಂಬಂಧ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಮೆರಿಕದ ಕೆಲವು ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೆಗ್ಡೆ ತಿಳಿಸಿದ್ದಾರೆ.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications