ಮಾಹಿತಿ ತಂತ್ರಜ್ಞಾನದ ಸಕಲವಸ್ತು ಭಂಡಾರ
ಬೆಂಗಳೂರು : ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಾಗಾಲೋಟದಿಂದ ಬೆಳೆಯುತ್ತಿರುವ ನಗರ ಬೆಂಗಳೂರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತಾನು ಮಾಡಿರುವ ಸಾಧನೆಯನ್ನು ಜಗತ್ತಿಗೇ ತೋರಿಸುವ ಕಾಲ ಈಗ ಬಂದಿದೆ. ಏಷ್ಯಾ ಖಂಡದಲ್ಲಿಯೇ ಮಾಹಿತಿ ತಂತ್ರಜ್ಞಾನ ವಿಶ್ವದ ಬೃಹತ್ ಪ್ರದರ್ಶನಗಳಲ್ಲಿ ಒಂದು ಎಂದು ಬಣ್ಣಿಸಲಾಗುತ್ತಿರುವ ಬೆಂಗಳೂರು ಐಟಿ ಡಾಟ್ಕಾಂ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಅದೂ ರಾಜ್ಯೋತ್ಸವ ದಿನದಂದು ಆರಂಭಗೊಳ್ಳುತ್ತಿದೆ.
ನವೆಂಬರ್ 1ರಿಂದ 5ನೇ ತಾರೀಖಿನವರೆಗೆ ನಡೆಯುವ ಈ ಪ್ರದರ್ಶನಕ್ಕೆ ನವವಧುವಿನಂತೆ ಬೆಂಗಳೂರು ಅರಮನೆ ಆವರಣ ಸಜ್ಜುಗೊಂಡಿದೆ. ಈ ವಸ್ತು ಪ್ರದರ್ಶನದ ವಿಸ್ತೀರ್ಣ ಎಂಟು ಸಾವಿರ ಚದರ ಮೀಟರ್ನಷ್ಟಿದೆ. ಈ ವಿಸ್ತಾರ ಭೂ ಪ್ರದೇಶದಲ್ಲಿ 12 ಮಳಿಗೆಗಳಿದ್ದು, 376 ಕಂಪನಿಗಳು ಭಾಗವಹಿಸುತ್ತಿವೆ. ಅಮೆರಿಕಾ ಈ ಮೇಳದ ಪಾಲುದಾರಿಕಾ ರಾಷ್ಟ್ರವಾಗಿರುವುದು ಈ ಬಾರಿಯ ವಿಶೇಷ.
ಜನಸಾಮಾನ್ಯರಿಗೆ ಮಾಹಿತಿ ತಂತ್ರಜ್ಞಾನದ ಅರಿವು ಮೂಡಿಸುವುದೇ ಈ ಮೇಳದ ಉದ್ದೇಶ. ಗ್ರಾಮೀಣ ವಿದ್ಯಾರ್ಥಿಗಳೂ ಕೂಡ ಮಾಹಿತಿ ತಂತ್ರಜ್ಞಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಕುರಿತ ರಸಪ್ರಶ್ನೆ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ. ಇಂಟರ್ನೆಟ್ ವಿಶ್ವದ ಬಗ್ಗೆ ಇಲ್ಲಿ ಚಿಂತನ - ಮಂಥನ ನಡೆಯಲಿದೆ.
ವಿದ್ಯಾರ್ಥಿಗಳಿಗಾಗಿಯೇ ವಿದ್ಯಾರ್ಥಿಗಳ ಇಂಟರ್ನೆಟ್ ಎಂಬ ಕಾರ್ಯಕ್ರಮವನ್ನು ಸಹ ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಇದು ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಲಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನೆಟ್ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ನೀಡಲಾಗುತ್ತದೆ. ಈ ಮೇಳದಲ್ಲಿ ಸಿಂಗಾಪೂರ್, ಜಪಾನ್, ಸ್ವೀಡನ್, ಬೆಲ್ಜಿಯಂ, ಸ್ಕಾಟ್ಲೆಂಡ್ ರಾಷ್ಟ್ರಗಳ ನಿಯೋಗಗಳೂ ಭಾಗವಹಿಸುತ್ತಿವೆ.
ಜಾಗತಿಕ ಬಂಡವಾಳ ಹೂಡಿಕೆದಾರರ ಮೇಳ ನಡೆಸಿ ವಿಶ್ವ ಭೂಪಟದಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದ ಬೆಂಗಳೂರು, ಈ ಮೇಳದಿಂದಾಗಿ ಮತ್ತಷ್ಟು ಜನಪ್ರಿಯತೆ ಗಳಿಸಲಿದೆ. ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ಇತ್ತೀಚಿನ ಅಮೆರಿಕಾ ಭೇಟಿ ಸಂದರ್ಭದಲ್ಲಿ ಭಾರತಕ್ಕೆ ಮತ್ತಷ್ಟು ಬೆಂಗಳೂರುಗಳ ಅಗತ್ಯವಿದೆ ಎಂದು ಹೇಳಿರುವುದು ಬೆಂಗಳೂರು ನಗರ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಗೆ ಹಿಡಿದ ಕನ್ನಡಿಯಾಗಿದೆ.
(ಇನ್ಫೊ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಬೆಂಗಳೂರು ಐಟಿ.ಕಾಂ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications