ಕಳ್ಳ ಸಾಗಣೆಯಾಗಲಿದ್ದ 256 ಟನ್ ಶ್ರೀಗಂಧ ವಶ : ರಂಗನಾಥ್
ಬೆಂಗಳೂರು : ಅತಿವೃಷ್ಟಿ ಸೇರಿದಂತೆ ವಿವಿಧ ವಿಷಯಗಳಲ್ಲಿ ರಾಜ್ಯಗಳಿಗೆ ತುರ್ತು ಮತ್ತು ಸೂಕ್ತ ನೆರವು ನೀಡಲು ಅನುಕೂಲವಾಗುವಂತೆ ರಾಷ್ಟ್ರದ ಆರ್ಥಿಕ ಆಡಳಿತ ವ್ಯವಸ್ಥೆಯನ್ನು ರಾಜ್ಯಗಳ ಪರವಾಗಿ ಪುನಾರಚಿಸಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮಂಗಳವಾರ ಸಲಹೆ ಮಾಡಿದ್ದಾರೆ.
ಅತಿವೃಷ್ಟಿಯಿಂದ ರಾಜ್ಯದಲ್ಲಿ ಆಗಿರುವ ಹಾನಿಗೆ ಸಂಬಂಧಿಸಿದ ಚರ್ಚೆಯಲ್ಲಿ ಮಧ್ಯೆಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ, ನೈಸರ್ಗೀಕ ವಿಕೋಪಗಳ ಸಂದರ್ಭದಲ್ಲಿ ಕೇಂದ್ರ ಸರಕಾರ ಇನ್ನೂ ಪರಿಣಾಮಕಾರಿಯಾಗಿ ರಾಜ್ಯಗಳಿಗೆ ನೆರವಾಗಬೇಕು. ನೆರೆಯ ಆಂಧ್ರಪ್ರದೇಶಕ್ಕೆ ನೀಡಿದಂತೆ ಕರ್ನಾಟಕದ ಬಗೆಗೂ ಹೆಚ್ಚಿನ ಗಮನಹರಿಸಬೇಕು ಎಂದರು. ಈ ಸಂಬಂಧ ಕೇಂದ್ರಕ್ಕೆ ವಿವರವಾದ ವರದಿ ತಯಾರಿಸಿ ಹೆಚ್ಚಿನ ನೆರವಿಗಾಗಿ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
300 ಕೋಟಿ ನೆರವಿಗೆ ಮನವಿ : ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಯಾಗಿರುವ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 300 ರುಪಾಯಿ ನೆರವಿಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಎಚ್. ಸಿ. ಶ್ರೀಕಂಠಯ್ಯ ವಿಧಾನಸಭೆಗೆ ತಿಳಿಸಿದ್ದಾರೆ.
ಈ ಸಂಬಂಧ ಇಲಾಖೆಯ ಕಾರ್ಯದರ್ಶಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಹಣವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಒತ್ತಾಯಿಸಲು ತಾವು ಶೀಘ್ರವಾಗಿ ದೆಹಲಿಗೆ ತೆರಳುವುದಾಗಿ ಸಚಿವರು ತಿಳಿಸಿದ್ದಾರೆ.
ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರಕಾರ ಈಗಾಗಲೇ 47 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಅತಿವೃಷ್ಟಿಯಿಂದ ಬೆಳೆಗಳ ನಾಶ ಹೊರತುಪಡಿಸಿ ಸುಮಾರು 218 ಕೋಟಿ ರುಪಾಯಿಗಳ ನಷ್ಟ ಸಂಭವಿಸಿದ್ದು, 158 ಜನ ಪ್ರಾಣ ಕಳೆದುಕೊಂಡಿದ್ದಾರೆ. 10956 ಕಿಲೋಮೀಟರ್ ರಸ್ತೆ ಮತ್ತು 46826 ಮನೆಗಳು ಹಾನಿಗೊಂಡಿವೆ, 36850 ಎಕರೆಯಲ್ಲಿನ ಬೆಳೆಗಳು ನಾಶವಾಗಿವೆ ಎಂದು ಹೇಳಿದ್ದಾರೆ.
ನೈಸರ್ಗೀಕ ದುರಂತಗಳ ಸಂದರ್ಭದಲ್ಲಿ ರೈತರಿಗೆ ನೆರವಾಗಲು ಒಂದು ಸಾವಿರ ಕೋಟಿ ರುಪಾಯಿಗಳ ನಿಧಿ ಸ್ಥಾಪಿಸಬೇಕೆಂಬ ಸಂಯುಕ್ತ ಜನತಾದಳದ ಶಾಸಕ ಎಸ್. ಎಸ್. ಪಾಟೀಲ್ ಅವರ ಸಲಹೆಯನ್ನು ಪರಿಶೀಲಿಸುವುದಾಗಿ ಸಚಿವರು ಹೇಳಿದರು. ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶಟ್ಟರ್, ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಸಭಾತ್ಯಾಗ ಮಾಡಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications