Get Updates
Get notified of breaking news, exclusive insights, and must-see stories!

ಏಕರೂಪದ ತೆರಿಗೆ ನೀತಿಗೆ ಜಪಾನಿ ನಿಯೋಗ ಮನವಿ

* ಇಮ್ರಾನ್‌ ಖುರೇಷಿ

ಬೆಂಗಳೂರು : ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರನ್ನು ಗುರುವಾರ ಭೇಟಿಯಾದ ಜಪಾನಿನ ಉನ್ನತ ಮಟ್ಟದ ವಾಣಿಜ್ಯ ನಿಯೋಗ, ಭಾರತದ ಐಟಿ ಕ್ಷೇತ್ರದಲ್ಲಿ ಜಪಾನಿನ ಬಂಡವಾಳವನ್ನು ಪ್ರೋತ್ಸಾಹಿಸಲು, ಎಲ್ಲಾ ರಾಜ್ಯಗಳೂ ಏಕರೂಪದ ತೆರಿಗೆ ನೀತಿಯನ್ನು ಅಳವಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿತು.

ಅಕ್ಟ್ರಾಯ್‌ನಂತಹ ತೆರಿಗೆ ನೀತಿಗಳಲ್ಲಿ ಎಲ್ಲಾ ರಾಜ್ಯಗಳು ಒಮ್ಮತದ ನೀತಿ ಅನುಸರಿಸುವುದು ಅಗತ್ಯ ಎಂದು ನಿಯೋಗದ ಭೇಟಿಯ ಸಮಯದಲ್ಲಿ ಕೃಷ್ಣ ಅವರಿಗೆ ತಿಳಿಸಿರುವ ಸೋನಿ ಕಾರ್ಪೊರೇಷನ್‌ನ ಅಧ್ಯಕ್ಷ ಜೆ. ಐಕೊ, ಮುಂದಿನ ಸಾರಿ ಈ ಬಗ್ಗೆ ಚರ್ಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಐಕೊ ಅವರ ಸಲಹೆ ಉತ್ತಮವಾಗಿದೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಕೃಷ್ಣ ಅವರು, ಏಕರೂಪದ ಮಾರಾಟ ತೆರಿಗೆ ಪದ್ಧತಿಯನ್ನು ರೂಪಿಸಲು ನಾವು ಪ್ರಯತ್ನ ನಡೆಸುತ್ತಿದ್ದೇವೆ, ಕೆಲವು ವಸ್ತುಗಳನ್ನು ಹೊರತು ಪಡಿಸಿದರೆ ಉಳಿದಂತೆ ತೆರಿಗೆಯ ದರ ಎಲ್ಲಾ ರಾಜ್ಯಗಳಲ್ಲೂ ಏಕರೂಪವಾಗಿದೆ ಎಂದು ಹೇಳಿದ್ದಾರೆ. ಭೇಟಿಯ ಸಮಯದಲ್ಲಿ ಭಾರತದಲ್ಲಿನ ಜಪಾನಿ ರಾಯಭಾರಿ ಎಚ್‌. ಹಿರಾಬಯ್‌ಷಿ ಅವರ ಸಮ್ಮುಖದಲ್ಲಿ ಕೆಲವು ಒಪ್ಪಂದಗಳಿಗೆ ನಿಯೋಗ ಸಮ್ಮತಿ ಸೂಚಿಸಿತು.

ಜಪಾನಿನ ಪ್ರಧಾನಿ ಯಾಷಿರೊ ಮೋರಿ ಅವರ ಇತ್ತೀಚಿನ ಭಾರತ ಭೇಟಿಯ ಸಮಯದಲ್ಲಿ , ಕೇಂದ್ರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಮೋದ್‌ ಮಹಾಜನ್‌ ಅವರು ಬಂಡವಾಳ ಹೂಡಿಕೆಗೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ಸರಿಪಡಿಸುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ವಾಣಿಜ್ಯ ನಿಯೋಗಕ್ಕೆ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

(ಐಎಎನ್‌ಎಸ್‌)

ವಾರ್ತಾ ಸಂಚಯ
ಮುಖಪುಟ / ಬೆಂಗಳೂರು ಐಟಿ.ಕಾಂ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+