ಹಂಪೆಯ ನೆಲದಿಂದ ಕನ್ನಡತನದ ವಿಸ್ತರಣೆ - ಎಸ್.ಎಂ. ಕೃಷ್ಣ
ಬಳ್ಳಾರಿ: ದಶಕ ಪೂರೈಸಿರುವ ಕನ್ನಡ ವಿಶ್ವವಿದ್ಯಾಲಯಕ್ಕೆ 50 ಲಕ್ಷ ರುಪಾಯಿ ಅನುದಾನ ನೀಡುವ ಹಾಗೂ ಮುಂದಿನ ವರ್ಷದಿಂದ ಹಂಪಿ ಉತ್ಸವ ಆಚರಣೆಗೆ 30 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಕಾಯ್ದಿರಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಶುಕ್ರವಾರ ಪ್ರಕಟಿಸಿದ್ದಾರೆ.
ನಾಡಿನ ಇತಿಹಾಸದಲ್ಲಿ ಕನ್ನಡ ವಿಶ್ವವಿದ್ಯಾನಿಲಯದ ಸ್ಥಾಪನೆ ಏಕೀಕರಣದ ನಂತರದ ಮಹತ್ವದ ಮೈಲುಗಲ್ಲಾಗಿದೆ, ಬೆಳವಣಿಗೆಯಾಂದಿಗೆ ಸವಾಲನ್ನೂ ಎದುರಿಸುತ್ತಿರುವ ಸಂದರ್ಭದಲ್ಲಿ ನಾಡು, ನುಡಿ, ಸಂಸ್ಕೃತಿಗಳನ್ನು ಪೋಷಿಸುವುದು ಹಾಗೂ ಪುನರುಜ್ಜೀವನಗೊಳಿಸುವುದು ಕನ್ನಡ ವಿವಿಯ ಗುರಿಯಾಗಬೇಕು ಎಂದು ಕೃಷ್ಣ ಹೇಳಿದರು. ವಿವಿಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ವಿಶ್ವವಿದ್ಯಾಲಯದ ಸಂಶೋಧನೆ, ಪ್ರಕಟಣೆ ಮುಂತಾದ ಜ್ಞಾನ ಪ್ರಸಾರದ ಕಾರ್ಯಗಳಿಗೆ ಯಾವುದೇ ತೊಂದರೆ ಉಂಟಾಗದಂತೆ 50 ಲಕ್ಷ ರು.ಗಳ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ಪ್ರಕಟಣೆ ಹಂತದಲ್ಲಿರುವ ಕುವೆಂಪು ಸಮಗ್ರ ಕಾವ್ಯ ಹಾಗೂ ಕನ್ನಡದ ಮೂಲಕ ವಿಶ್ವವನ್ನು ಪರಿಚಯಿಸುವ ವಿಶ್ವಕೋಶಗಳ ಪ್ರಕಟಣಾ ಕಾರ್ಯಗಳನ್ನು ಕೈಗೊಂಡಿರುವ ವಿವಿ ಚಟುವಟಿಕೆಗಳನ್ನು ಕೃಷ್ಣ ಅಭಿನಂದಿಸಿದರು. ಈಗಾಗಲೇ ಗಳಗನಾಥರ ಕಾದಂಬರಿ ಸಂಪುಟಗಳನ್ನು ಹೊರ ತಂದಿರುವ ವಿವಿ, 12 ಸಂಪುಟಗಳ ವಿಶ್ವಕೋಶ ಪ್ರಕಟಣೆ ಕಾರ್ಯ ಹಮ್ಮಿಕೊಂಡಿದ್ದು, ಅದರಲ್ಲಿ 3 ಸಂಪುಟಗಳು ಶುಕ್ರವಾರ ಬಿಡುಗಡೆಯಾದವು.
ಕನ್ನಡವನ್ನು ಕಟ್ಟುವ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡುತ್ತಿರುವ ವಿಶ್ವವಿದ್ಯಾಲಯವನ್ನು ಶ್ಲಾಘಿಸಿದ ಅವರು, ಹಂಪಿಯ ನೆಲದಿಂದ ಕನ್ನಡತನವನ್ನು ವಿಸ್ತರಿಸುವ ಕೆಲಸಗಳು ನಡೆಯುತ್ತಿವೆ ಎಂದರು. ವಿಜಯನಗರ ಇತಿಹಾಸ ಸಂಪುಟ- 5 ಹಾಗೂ ಸಾವಿರ ಕೀರ್ತನೆ ಕೃತಿಗಳನ್ನು ಇದೇ ಸಂದರ್ಭದಲ್ಲಿ ಕೃಷ್ಣ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಹಾಜರಿದ್ದರು.
ಸಮಾಳ ಬಾರಿಸುವ ಮೂಲಕ ಹಂಪಿ ಉತ್ಸವಕ್ಕೆ ಚಾಲನೆ
ಹೊಸಪೇಟೆಯಲ್ಲಿ ಶುಕ್ರವಾರ ಆರಂಭವಾದ ಹಂಪಿ ಉತ್ಸವವನ್ನು ಸಮಾಳ ಬಾರಿಸುವ ಮೂಲಕ ಉದ್ಘಾಟಿಸಿದ ಮುಖ್ಯಮಂತ್ರಿಗಳು, ಮುಂದಿನ ವರ್ಷದಿಂದ ಉತ್ಸವವನ್ನು ವೈಭವದಿಂದ ಆಚರಿಸುವ ಉದ್ದೇಶದಿಂದ ಆಯವ್ಯಯದಲ್ಲಿ 30 ಲಕ್ಷ ರುಪಾಯಿಗಳನ್ನು ತೆಗೆದಿರಿಸಲಾಗುವುದು ಎಂದರು.
ಹಂಪಿಯ ಪರಂಪರೆ ರಕ್ಷಣೆಗಾಗಿ ಯುನೆಸ್ಕೋ ಹಾಗೂ ಬಳ್ಳಾರಿ ಜಿಲ್ಲಾಡಳಿತ ಸೂಚಿಸಿರುವಂತೆ ಹಂಪಿ ಪ್ರಾಧಿಕಾರ ಮತ್ತು ಹಂಪಿ ಪ್ರದೇಶಾಭಿವೃದ್ಧಿ ಸಮಿತಿ ರಚಿಸಲು ಸರ್ಕಾರ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಎಂ. ವೈ. ಘೋರ್ಪಡೆ ಅವರು, ಹಂಪಿ- ಆನೆಗೊಂದಿಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications