ವಿಶ್ವ ಬ್ಯಾಂಕ್ ಅಧ್ಯಕ್ಷ ಡಿ. ವೋಲೆನ್ಸೋನ್ಮಂಗಳವಾರ ಬೆಂಗಳೂರಿಗೆ
ಬೆಂಗಳೂರು : ವಿಶ್ವ ಬ್ಯಾಂಕ್ ಅಧ್ಯಕ್ಷ ಡಿ. ವೋಲ್ಫೆನ್ಸೋನ್ ಅವರು, ಮೂರು ದಿನಗಳ ಕರ್ನಾಟಕ ಭೇಟಿಗಾಗಿ ಮಂಗಳವಾರದಂದು ಬೆಂಗಳೂರಿಗೆ ಬರಲಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ವಿಶ್ವಬ್ಯಾಂಕ್ ನೆರವಿನ ಅಭಿವೃದ್ದಿ ಕಾರ್ಯಗಳ ಕುರಿತು ವೋಲ್ಫೆನ್ಸೋನ್ ಅವರಿಗೆ ವಿವರಿಸಲಾಗುವುದು. ಬುಧವಾರದಂದು ವಿಶ್ವ ಪರಂಪರೆ ಪಟ್ಟಿಯಲ್ಲಿರುವ ಹಂಪೆಯನ್ನು ಸಂದರ್ಶಿಸಿ, ಬ್ಯಾಂಕ್ ನೆರವಿನಿಂದ ನೀರು, ನೈರ್ಮಲ್ಯ, ಆರೋಗ್ಯ ರಕ್ಷಣೆಯ ಕುರಿತು ಬಳ್ಳಾರಿಯಲ್ಲಿ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಮಹಿಳಾ ಸಂಘಟನೆಗಳೊಡನೆ ಅವರು ಮಾತುಕತೆ ನಡೆಸಲಿದ್ದಾರೆ.
ಬುಧವಾರದಂದೇ ಅವರು ಹಳ್ಳಿಕೆರೆಯ ಶಾಲೆಗೆ ಭೇಟಿ ನೀಡಿ, ಗ್ರಾಮೀಣ ಶಿಕ್ಷಣ ಸಮಿತಿ, ಉಪಾಧ್ಯಾಯರು, ಮಕ್ಕಳು ಮತ್ತು ಪಾಲಕರೊಡನೆ ಮಾತನಾಡಲಿದ್ದಾರೆ. ಪಣಿಯ ನಾಯಕನ ಹಳ್ಳಿಯ ಮಲಪನಗುಡಿಯನ್ನು ವೀಕ್ಷಿಸುವ ಕಾರ್ಯಕ್ರಮವೂ ಅವರ ವೇಳಾಪಟ್ಟಿಯಲ್ಲಿದ್ದು, ಅಲ್ಲಿ ನೀರು ಪೂರೈಕೆ ಯೋಜನೆ ಕಾರ್ಯಗತವಾಗಿರುವ ವಿಧಾನಗಳನ್ನು ಅವಲೋಕಿಸುತ್ತಾರೆ. ಸಂಜೆ ಮತ್ತೆ ಬೆಂಗಳೂರಿನಲ್ಲಿ ರಾಜ್ಯ ಸರಕಾರದ ಸುಧಾರಣಾ ಕಾರ್ಯಕ್ರಮಗಳನ್ನು ನೋಡಿಕೊಂಡು ಮುಖ್ಯ ಮಂತ್ರಿ ಎಸ್. ಎಂ. ಕೃಷ್ಣರ ಆತಿಥ್ಯದಲ್ಲಿ ರಾತ್ರಿ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ.
ಮರುದಿನ ಬೆಳಿಗ್ಗೆ ಸರಕಾರಿ ಅಧಿಕಾರಿಗಳು, ಶಿಕ್ಷಣ ತಜ್ಞರು ಮತ್ತು ಸರಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸುತ್ತಾ ಬೆಳಗಿನ ಉಪಹಾರ ಸೇವಿಸಿ, ನಂತರ ಇನ್ಫೋಸಿಸ್ನ ಐಟಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಾರೆ. ಗುರುವಾರದಂದು ಅವರು ಹೈದರಾಬಾದ್ಗೆ ತೆರಳಲಿದ್ದು, ಅದಕ್ಕೂ ಮುನ್ನ , ಮುಖ್ಯ ಮಂತ್ರಿಗಳ ಜೊತೆ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸುವ ನಿರೀಕ್ಷೆಯೂ ಇದೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications