ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳ್ಳ ಸಾಗಣೆಯಾಗಲಿದ್ದ 256 ಟನ್‌ ಶ್ರೀಗಂಧ ವಶ : ರಂಗನಾಥ್‌

By Staff
|
Google Oneindia Kannada News

ಬೆಂಗಳೂರು : ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಿಂದ ಹೊರ ರಾಜ್ಯಗಳಿಗೆ ಕಳ್ಳಸಾಗಣೆ ಆಗಲಿದ್ದ ಸುಮಾರು 256 ಟನ್‌ಗಳಷ್ಟು ಗಂಧದ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಿಷಯವನ್ನು ರಾಜ್ಯ ಅರಣ್ಯ ಖಾತೆ ಸಚಿವ ಕೆ.ಎಚ್‌. ರಂಗನಾಥ್‌ ಮಂಗಳವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

ಈ ಸಂಬಂಧ ಒಟ್ಟು 1923 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಆ ಪೈಕಿ 606 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಅವರು, ಜನತಾದಳದ ಶಾಸಕ ಬಿ.ಎಲ್‌. ಶಂಕರ್‌ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದರು.

ಈ ರೀತಿ ವಶಪಡಿಸಿಕೊಳ್ಳಲಾದ ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುವ ವಿಧಿ ವಿಧಾನಗಳನ್ನು ಸರಳಗೊಳಿಸುವ ಬಗ್ಗೆ ಸರಕಾರ ಚಿಂತಿಸುತ್ತಿದೆ ಎಂದೂ ಹೇಳಿದರು. (ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X