ಗಂಗಾವತಿ ಉದ್ರಿಕ್ತ : ಸಚಿವರ ಮನೆಗೆ ರೈತರ ಮುತ್ತಿಗೆ ಯತ್ನ
ಗಂಗಾವತಿ : ಭತ್ತಕ್ಕೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಸೋಮವಾರ ಮುತ್ತಿಗೆ ಹಾಕಲು ಪ್ರಯತ್ನಿಸಿದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಯಲ್ಲಿ ಉಂಟಾದ ನೂಕು ನುಗ್ಗಲಲ್ಲಿ ನೂರಾರು ರೈತರು ಗಾಯಗೊಂಡಿದ್ದಾರೆ.
ಪಟ್ಟಣದಲ್ಲಿ ಮೂರು ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಶಾಸಕರ ಹಾಗೂ ಸಚಿವರ ಮನೆಗೆ ಸೂಕ್ತ ರಕ್ಷಣೆ ಒದಗಿಸಲಾಗಿದೆ. ಪೊಲೀಸರ ದಾಳಿಯಿಂದ ಗಾಯಗೊಂಡಿರುವ ರೈತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಹಿನ್ನೆಲೆ : ಭತ್ತದ ಬೆಳೆಗೆ ಬೆಂಬಲ ಬೆಲೆ ನಿಶ್ಚಯ ಪಡಿಸುವ ವಿಷಯದ ಕುರಿತ ಜಿಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಲು ನ. 6 ರಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಎಂ. ಮಲ್ಲಿಕಾರ್ಜುನ ನಾಗಪ್ಪ ಸಭೆ ನಡೆಸಲು ಸೂಚಿಸಿದ್ದರು. ಆದರೆ, ಮಂಗಳವಾರ ಕೃಷಿ ಮಾರುಕಟ್ಟೆ ಆವರಣದಲ್ಲಿ ಸೇರಿದ್ದ ಸುಮಾರು 4 ಸಾವಿರ ರೈತರು, ಸಚಿವರು ತಮ್ಮಲ್ಲಿಗೇ ಬಂದು ಸಮಜಾಯಿಷಿ ನೀಡಲು ಪಟ್ಟು ಹಿಡಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಚರ್ಚಿಸುವುದಾಗಿ ಆಶ್ವಾಸನೆ ನೀಡಿದ ಸಚಿವರು, ತಮ್ಮ ಬೆಂಬಲಿಗರೊಂದಿಗೆ ಮಾತ್ರ ಸಮಾಲೋಚನೆ ನಡೆಸಿದರು. 4 ಗಂಟೆಗಳ ಕಾಲ ಕಾದರೂ ತಮ್ಮಲ್ಲಿಗೆ ಬರದ ಸಚಿವರ ಬಗ್ಗೆ ರೊಚ್ಚಿಗೆದ್ದ ರೈತರು, ಸಚಿವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದರು.
ಸಚಿವರು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ನಡೆದಿದ್ದ ರೈತರ ಗುಂಪನ್ನು ನೀಲಕಂಠೇಶ್ವರ ಸರ್ಕಲ್ ಬಳಿ ರೈತರು ತಡೆದರು. ಈ ಸಂದರ್ಭದಲ್ಲಿ ರೈತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಸಿಡಿತ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದರು. ಈ ಮುನ್ನ ಸಚಿವರ ಮನೆಯತ್ತ ಧಾವಿಸುತ್ತಿದ್ದ ರೈತರನ್ನು ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ಪೊಲೀಸರು ತಡೆದಾಗ ರೈತರು ಮತ್ತು ಪೊಲೀಸರ ನಡುವೆ ಮಾರಾಮಾರಿ ನಡೆಯಿತು.
ಗಂಗಾವತಿ ಬಂದ್ : ಗಲಭೆಯಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಕಲ್ಲು ತೂರಿದ ಘಟನೆಗಳು ನಡೆದಿವೆ. ಬಜಾರಿನಲ್ಲಿನ ಎಲ್ಲಾ ಅಂಗಡಿಗಳನ್ನು ರೈತರು ಬಲವಂತವಾಗಿ ಮುಚ್ಚಿಸಿ ಬಂದ್ ಆಚರಿಸಿದರು. ಶಾಲಾ ಕಾಲೇಜುಗಳು, ಸಿನಿಮಾ ಮಂದಿರಗಳು ಸೇರಿದಂತೆ ಎಲ್ಲಾ ವ್ಯವಹಾರಗಳು ಸ್ಥಗಿತವಾಗಿದ್ದವು. ಪ್ರಸ್ತುತ ಗಂಗಾವತಿ ನಗರ ಉದ್ರಿಕ್ತವಾಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications