ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊಸ ಬಸ್ ವ್ಯವಸ್ಥೆ
ಬೆಂಗಳೂರು : ಮಂತ್ರಾಲಯಕೆ ಹೋಗೋಣ... ಗುರುರಾಯರ ದರುಶನ ಮಾಡೋಣ... ಆ್ಹ ಮಂತ್ರಾಲಯಕ್ಕೆ ಹೋಗಿ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಮಾಡ ಬಯಸುವ ಭಕ್ತಾದಿಗಳ ಅನುಕೂಲಕ್ಕಾಗಿ ಈಗ ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಅತ್ಯಾಧುನಿಕ ಹಾಗೂ ಸುಸಜ್ಜಿತ ಪ್ರವಾಸಿ ಬಸ್ ಸಂಚಾರ ಆರಂಭಿಸಿದೆ.
ಆಂಧ್ರಪ್ರದೇಶ ಪ್ರವಾಸೋದ್ಯಮ ನಿಗಮದ ಸಹಯೋಗದಲ್ಲಿ ಆರಂಭಿಸಲಾಗಿರುವ ಮೂರು ದಿನಗಳ ಈ ಪ್ಯಾಕೇಜ್ ಪ್ರವಾಸದಲ್ಲಿ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹೋಗಿ ಬೃಂದಾವನ ದರ್ಶನದ ನಂತರ ಅಲ್ಲಿಗೆ 20 ಕಿ.ಮೀಟರ್ ದೂರದಲ್ಲಿರುವ ಪಂಚಮುಖಿ ಪ್ರಾಣದೇವರ ದರ್ಶನ ಮಾಡಲೂ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿ ತಾಣಗಳ ಬಗೆಗಿನ ಮಾರ್ಗದರ್ಶನವೂ ಇದರಲ್ಲಿ ಅಡಕವಾಗಿದೆ.
2 ರಾತ್ರಿ ಹಾಗೂ 1 ಹಗಲಿನ ಈ ಪ್ರವಾಸಕ್ಕೆ ಒಬ್ಬರಿಗೆ 650 ರುಪಾಯಿಗಳು. ಪ್ರವಾಸಿಗರಿಗೆ ಆಂಧ್ರಪ್ರದೇಶ ಪ್ರವಾಸೋದ್ಯಮ ನಿಗಮದ ಅಥಿತಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇದೆ. ರಾತ್ರಿ 8.30ಕ್ಕೆ ಬಸ್ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಡುತ್ತದೆ.
ಶ್ರೀಶೈಲಕ್ಕೆ ಸಹ ಪ್ರವಾಸ ಕಾರ್ಯಕ್ರಮ ರೂಪಿಸಲು ನಿಗಮ ಸಿದ್ಧತೆ ನಡೆಸಿದೆ. ಈ ಪ್ರವಾಸಗಳಿಗೆ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಆಂಧ್ರಪ್ರದೇಶ ಪ್ರವಾಸೋದ್ಯಮ ನಿಗಮದ ಬಸ್ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಒಡಂಬಡಿಕೆ ಮಾಡಿಕೊಂಡಿದೆ. ದಕ್ಷಿಣ ರಾಜ್ಯಗಳ ಪ್ರವಾಸ ಕಾರ್ಯಕ್ರಮವನ್ನು ಆರಂಭಿಸುವ ಸಿದ್ಧತೆಗಳನ್ನೂ ಸಂಸ್ಥೆ ನಡೆಸಿದೆ ಎಂದು ಆರ್.ಎನ್. ಆಲೂರ್ ತಿಳಿಸಿದ್ದಾರೆ.
ಕರ್ನಾಟಕದ ಸುಪ್ರಸಿದ್ಧ ಪ್ರವಾಸಿ ತಾಣಗಳ ವೀಕ್ಷಣೆಗೂ ಇದೇ ಮಾದರಿಯ ಪ್ಯಾಕೇಜ್ ಟೂರ್ ಯೋಜನೆಯನ್ನು ನಿಗಮ ಆರಂಭಿಸಿದೆ. ಹೆಚ್ಚಿನ ವಿವರಗಳನ್ನು ರೇಸ್ಕೋರ್ಸ್ ರಸ್ತೆಯ ಸ್ವಿಸ್ ಸಮುಚ್ಛಯದಲ್ಲಿರುವ ಭಾರತ ಪ್ರವಾಸೋದ್ಯಮ ನಿಗಮದಲ್ಲಿ ಪಡೆಯಬಹುದು. ದೂರವಾಣಿ ಸಂಖ್ಯೆ : 2383361.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications